ಕಡು ಬಡತನ ಮುಕ್ತ ಕೇರಳ ರಾಜ್ಯ: ಎಲ್‌ಡಿಎಫ್‌ ಸರ್ಕಾರಕ್ಕೆ ಕೆಪಿಆರ್‌ಎಸ್‌ ಅಭಿನಂದನೆ

Date:

ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಭಾರತದಲ್ಲಿನ ಯಾವುದೇ ರಾಜ್ಯಕ್ಕೂ ಅಥವಾ ಕೇಂದ್ರ ಸರ್ಕಾರಕ್ಕೂ ಸಾಧ್ಯವಾಗದಂತಹ “ಕಡು ಬಡತನ ಮುಕ್ತ ರಾಜ್ಯ”ದ ಅಪೂರ್ವ ಸಾಧನೆಯನ್ನು ಕೇರಳ ರಾಜ್ಯ ಸಾಧಿಸಿದ್ದು, ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಸರ್ಕಾರದ ಮಹತ್ತರ ಯಶಸ್ಸು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಅಭಿನಂದಿಸಿದೆ.

ಸ್ವಾತಂತ್ರ್ಯ ನಂತರ ಮೊದಲ ಕೇರಳ ಶಾಸನಸಭೆಯಲ್ಲಿ ಇಎಂಎಸ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಭೂ ಹಂಚಿಕೆ, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾರ್ವಜನಿಕ ವಲಯದ ಬಲಪಡಿಸುವ ಮೂಲಕ ಅಡಿಗಲ್ಲು ಇಟ್ಟಿತ್ತು. ಬಳಿಕ ಅಧಿಕಾರ ಕಳೆದುಕೊಂಡು ದುರ್ಬಲಗೊಂಡಿದ್ದರೂ, ಸತತ ಎರಡನೇ ಅವಧಿಗೆ ಅಧಿಕಾರ ಪಡೆದ ಪಿಣರಾಯಿ ವಿಜಯನ್‌ ನೇತೃತ್ವದ ಸರ್ಕಾರ “ಕಡು ಬಡತನ ಮುಕ್ತ ಕೇರಳ” ಎಂಬ ತನ್ನ ಗುರಿಯನ್ನು ಸಾಧಿಸಿದೆ.

ಇಡೀ ಪ್ರಪಂಚದಲ್ಲಿ ಬಂಡವಾಳಶಾಹಿ ಅಭಿವೃದ್ಧಿ ಮಾದರಿಯಿಂದ ಕಡು ಬಡತನ ಹೆಚ್ಚುತ್ತಿರುವ ಸಂದರ್ಭದಲ್ಲಿ, ನವ ಉದಾರೀಕರಣ ಚೌಕಟ್ಟಿನ ಸೀಮಿತ ಅವಕಾಶದಲ್ಲಿ ಈ ಸಾಧನೆ ಜನ ಕಲ್ಯಾಣದ ಸಂವಿಧಾನ ಆಶಯದ ವಿಶಿಷ್ಟ ಮಾದರಿಯಾಗಿ ದೇಶಕ್ಕೆ ಪರಿಚಯವಾಗಿದೆ ಎಂದು ಕೆಪಿಆರ್‌ಎಸ್ ಹೇಳಿದೆ. 1998ರಿಂದ ಸತತ 30 ವರ್ಷಗಳ ಕಾಲ ಅಧಿಕಾರದಲ್ಲಿರುವ ಗುಜರಾತ್‌ನ ಬಿಜೆಪಿ ಸರ್ಕಾರದ ಕಡು ಬಡತನ ಪ್ರಮಾಣವನ್ನು ಹೋಲಿಸಿದರೆ, ಕೇರಳದ ಸಾಧನೆ ಅಮೂಲ್ಯ ಮತ್ತು ಅಪರೂಪದ್ದು ಎಂಬುದು ಸ್ಪಷ್ಟವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?

ಅತ್ಯಂತ ಸೀಮಿತ ತೆರಿಗೆ ಸಂಪನ್ಮೂಲ, ಕೇಂದ್ರದ ಅನ್ಯಾಯಯುತ ತೆರಿಗೆ ಹಂಚಿಕೆ ಹಾಗೂ ಅನುದಾನ ತಾರತಮ್ಯಗಳ ನಡುವೆಯೂ ಕೇರಳ ಸರ್ಕಾರ ಈ ಯಶಸ್ಸು ಸಾಧಿಸಿರುವುದು ಕರ್ನಾಟಕದಂತಹ ರಾಜ್ಯಗಳಿಗೆ ಅಧ್ಯಯನ ಯೋಗ್ಯ ಮತ್ತು ಅನುಕರಣೀಯ ಎಂದು ಕೆಪಿಆರ್‌ಎಸ್‌ ಅಭಿಪ್ರಾಯಪಟ್ಟಿದೆ.

ರಾಜ್ಯದ ಪ್ರತೀ ಕುಟುಂಬಕ್ಕೂ ವಸತಿ ಒದಗಿಸುವ ಗುರಿಯತ್ತ ಕೇರಳ ಸರ್ಕಾರ ಮುನ್ನಡೆಯುತ್ತಿರುವ ಈ ಜನಕಲ್ಯಾಣದ ಪರ್ವ ಮುಂದುವರಿಯಲೆಂದು, ಮತ್ತೊಂದು ಅವಧಿಗೆ ಎಲ್‌ಡಿಎಫ್‌ ಸರ್ಕಾರಕ್ಕೆ ಕೇರಳ ಜನತೆ ಅವಕಾಶ ನೀಡಬೇಕೆಂದು ಕೆಪಿಆರ್‌ಎಸ್‌ ರಾಜ್ಯ ಸಮಿತಿಯ ಅಧ್ಯಕ್ಷ ಯು. ಬಸವರಾಜ ಹಾಗೂ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...