ಕೃಷಿ ಬಿಕ್ಕಟ್ಟು, ಗ್ರಾಮೀಣ ನಿರುದ್ಯೋಗ, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸದ ಬಜೆಟ್ -KPRS ಟೀಕೆ

Date:

ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26 ರ ಈ ಬಜೆಟ್ ಕೂಡ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಕಟು ಟೀಕೆ ಮಾಡಿದೆ.

ಉದ್ದೇಶ ಮತ್ತು ಸ್ವರೂಪಗಳ ಪ್ರಸ್ತಾಪ ಇಲ್ಲದೇ ಹೊಸ ಭೂ ಕಂದಾಯ ಕಾಯ್ದೆಯ ಘೋಷಣೆ ಮಾಡಿರುವುದು ,ಕೃಷಿ ಭೂಮಿ ಪಹಣಿಗಳಿಗೆ ಆಧಾರ್ ಜೋಡಿಸಿ ಡಿಜಿಟಲೀಕರಣಗೊಳಿಸುವುದು ಈಗಾಗಲೇ ಕೇಂದ್ರಿಕೃತವಾಗಿ ನಿರ್ವಹಿಸಲ್ಪಡುತ್ತಿರುವ ಇಂತಹ ದಾಖಲಾತಿಗಳು , ಭೂ ಗಳ್ಳತನದಂತಹ ಹೊಸ ಹೊಸ ಸೈಬರ್ ಅಪರಾಧಗಳಿಗೆ ಕಾರಣವಾಗಬಹುದಾದ ಆತಂಕವನ್ನು ಉಂಟು ಮಾಡಿವೆ. ಈ ಹಿನ್ನೆಲೆಯಲ್ಲಿ ಇಂತಹ ಯಾವುದೇ ರೀತಿಯ ತೊಂದರೆಗೆ ರೈತರನ್ನು ಸಿಲುಕಿಸುವುದಿಲ್ಲ ಎಂದು ಸ್ಪಷ್ಟ ಶ್ವೇತಪತ್ರ ಹೊರಡಿಸದೇ ಇಂತಹ ಜೋಡಣೆ ಕೆಲಸಕ್ಕೆ ಮುಂದಾಗಬಾರದು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವ ಉದಾರೀಕರಣ ನೀತಿಗಳಿಗೆ ಮಣೆ ಹಾಕಿರುವ ಈ ಬಜೆಟ್ ಕೂಡ ಕೃಷಿ ಉತ್ಪಾದನೆ ಹಾಗೂ ಕೃಷಿ ಭೂಮಿ ರಕ್ಷಣೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಸಾಲಭಾಧೆಗೆ ತುತ್ತಾಗಿರುವ ಹಾಗೂ ಕೃಷಿ ಉತ್ಪನ್ನಗಳ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತ ಸಮುದಾಯಗಳಿಗೆ ಯಾವುದೇ ಪರಿಣಾಮಕಾರಿ ಪರಿಹಾರ ಒದಗಿಸಿಲ್ಲ. ಕೃಷಿಕರ ಆದಾಯ ಮತ್ತು ಜೀವನ ಭದ್ರತೆ ಹಾಗೂ ಕೃಷಿ ಉತ್ಪಾದನೆಯಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಬಗರ್ ಹುಕುಂ, ಅರಣ್ಯ ಸಾಗುವಳಿ, ಗೇಣಿ ರೈತರ ಕಲ್ಯಾಣವನ್ನು ಮತ್ತು ಅವರ ಹಕ್ಕು ಪತ್ರದ ಹಕ್ಕು ಅನ್ನು ನಿರ್ಲಕ್ಷಿಸಲಾಗಿದೆ. ಬಲವಂತದ ಭೂ ಸ್ವಾಧೀನದ ವಿರುದ್ಧ ರಕ್ಷಣೆ ನೀಡುವಂತೆ, ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಪ್ರೀಪೇಡ್ ಮೀಟರ್ ಅಳವಡಿಸುವ ಕೇಂದ್ರದ ವಿದ್ಯುತ್ ಖಾಸಗೀಕರಣ ನೀತಿಗೆ ನಿರಾಕರಣೆ, ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖಾತರಿ ಖರೀದಿಗೆ ವ್ಯವಸ್ಥೆ, ಸಾಲಭಾಧೆಯಿಂದ ಆತ್ಮಹತ್ಯೆಗೆ ತುತ್ತಾಗದಂತೆ ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿ ಮಾಡುವಂತೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಹೆಸರಿನಲ್ಲಿ ಭೂ ಮಾಪಿಯಾದ ಚಟುವಟಿಕೆಗಳನ್ನು ನಿಯಂತ್ರಿಸಿ ಕೃಷಿ ಭೂಮಿಯ ಕಾರ್ಪೊರೇಟ್ ಲೂಟಿ ತಡೆಯುವಂತೆ, ಗ್ರಾಮೀಣ ಜನತೆ ಭೂ ಹೀನತೆ ಹಾಗೂ ವಸತಿ ಹೀನತೆಗೆ ನಿವಾರಿಸುವಂತೆ ಬಜೆಟ್ ಪೂರ್ವ ದಲ್ಲಿ ತೀವ್ರ ಪ್ರತಿಭಟನೆ ಮೂಲಕ ಒತ್ತಾಯಿಸಿದ್ದರೂ ಈ ಬಜೆಟ್ ತೀವ್ರವಾಗಿ ಕಡೆಗಣಿಸಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಆಕ್ರೋಶ ವ್ಯಕ್ತಪಡಿಸಿದೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಆಗಿರುವ ನ್ಯಾಯಬದ್ಧ, ಶಾಸನಬದ್ದ ತೆರಿಗೆ ಪಾಲಿನಲ್ಲಿ ವಂಚನೆ, ಅಭಿವೃದ್ಧಿ ಅನುದಾನದಲ್ಲಿ ತಾರತಮ್ಯ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸದೇ ರಾಜ್ಯ ಸರ್ಕಾರಗಳ ಕತ್ತು ಹಿಸುಕುವ ಗಂಭೀರ ಸಮಸ್ಯೆ-ಸವಾಲುಗಳ ಮಧ್ಯೆಯೂ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಕೆಲವು ಕಲ್ಯಾಣ ಕಾರ್ಯಕ್ರಮಗಳಿಗೆ ಪ್ರಯತ್ನ ನಡೆಸಲಾಗಿದೆ. ಆದರೆ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಬೆಲೆ ಏರಿಕೆ ಯಂತಹ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಕೇವಲ ಗ್ಯಾರಂಟಿ ಯೋಜನೆಗಳು ರಾಜ್ಯದ ಅರ್ಥಿಕ ಅಭಿವೃದ್ದಿಗೆ ಯಾವುದೇ ಪರಿಣಾಮಕಾರಿ ಕೊಡುಗೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಕಳೆದ ಎರಡು ವರ್ಷಗಳ ಗ್ಯಾರಂಟಿ ಅನುಭವ ತೋರಿಸಿಕೊಟ್ಟಿದೆ. ಶಿಕ್ಷಣ, ಆರೋಗ್ಯ, ಕೃಷಿ ಮಾರುಕಟ್ಟೆ, ವಸತಿ ಮುಂತಾದ ಕ್ಷೇತ್ರಗಳಲ್ಲಿ ಖಾಸಗೀಕರಣ ಹಾಗೂ ಖಾಸಗಿ ಸಹಭಾಗಿತ್ವವನ್ನೇ ಪ್ರೊತ್ಸಾಹಿಸಲಾಗುತ್ತಿದೆ. ಇದು ಮತ್ತಷ್ಟು ನಿರುದ್ಯೋಗ, ಕೃಷಿ ಬಿಕ್ಕಟ್ಟು, ಬೆಲೆ ಏರಿಕೆಗೆ ಕಾರಣವಾಗಲಿದೆ.

ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳಾದ ಕರಾಳ ಕೃಷಿ ಕಾಯ್ದೆಗಳು ಹಾಗೂ ಭೂ ಸ್ವಾಧೀನ ಕಾಯ್ದೆಗಳ ರದ್ದತಿ ಘೋಷಣೆ ಈ ಬಜೆಟ್ ನಲ್ಲೂ ಕೂಡ ಮಾಡಿಲ್ಲ. ಕೃಷಿ ಮಾರುಕಟ್ಟೆಯಲ್ಲಿ ಖಾಸಗಿ ಸಹಭಾಗಿತ್ವ ವನ್ನು ಪ್ರೋತ್ಸಾಹಿಸುವ ಪ್ರಸ್ತಾಪ ಅಪಾಯಕಾರಿಯಾಗಿದೆ. ಈಗಾಗಲೇ ಎಪಿಎಂಪಿ ಕಾಯ್ದೆಗಳನ್ನು ದುರ್ಬಲಗೊಳಿಸಿರುವ ಕಾರಣ ಹಾಗೂ ಖಾಸಗಿ ಸಗಟು ಮಾರುಕಟ್ಟೆಗಳಿಗೆ ಅವಕಾಶ ಕಲ್ಪಿಸಿರುವ ಕಾರಣ ಮತ್ತಷ್ಟು ತೊಂದರೆ ರೈತರಿಗೆ ಉಂಟಾಗಲಿದೆ. ಕೂಡಲೇ ಖಾಸಗಿ ಕೃಷಿ ಮಾರುಕಟ್ಟೆಪರ ಧೋರಣೆ ಕೈ ಬಿಟ್ಟು ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಬೇಕು. ಭೂ ಸುಧಾರಣೆ ಕಾಯ್ದೆ 2020 ಸೇರಿದಂತೆ ಎಲ್ಲಾ ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...