ಕೃಷ್ಣಾ-ಭದ್ರಾ ಮೇಲ್ದಂಡೆ; ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಲು ಕೇಂದ್ರಕ್ಕೆ ಆಗ್ರಹ

Date:

ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುವ 75,563 ಎಕರೆ ಜಮೀನಿನ ಸ್ವಾಧೀನ ಒಂದೇ ಹಂತದಲ್ಲಿ ನಡೆಯಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಗುರುವಾರ ಜಂಟಿ ಅಧಿವೇಶನದಲ್ಲಿ ಮಂಡಿಸಲಾದ ರಾಜ್ಯಪಾಲರ ಭಾಷಣದಲ್ಲಿ ಈ ಅಂಶವನ್ನು ತಿಳಿಸಲಾಗಿದೆ.

ಭಾಷಣದಲ್ಲಿ ಸಂಬಂಧಪಟ್ಟ ಅಂಶಗಳು ಈ ಕೆಳಕಂಡಂತಿವೆ:
“ಸರ್ಕಾರವು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ವಿಶೇಷ ಆದ್ಯತೆ ನೀಡಿದೆ. ಯೋಜನೆಯ ತ್ವರಿತ ಭೂ ಸ್ವಾಧೀನ ಪ್ರಕ್ರಿಯೆಗಾಗಿ ವಿಶೇಷ ಸಚಿವ ಸಂಪುಟ ಸಭೆಯನ್ನು ನಡೆಸಿ, ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುವ 75,563 ಎಕರೆ ಜಮೀನನ್ನು ಒಂದೇ ಹಂತದಲ್ಲಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ರೈತರ ಹಿತದೃಷ್ಟಿಯಿಂದ ‘ಒಪ್ಪಂದದ ಐತೀರ್ಪು ದರ’ಗಳಿಗೆ ಅನುಮೋದನೆ ನೀಡಲಾಗಿದೆ. ಮುಳುಗಡೆಯಾಗುವ ಖುಷ್ಕಿ ಜಮೀನುಗಳಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ನೀರಾವರಿ ಜಮೀನಿಗೆ ರೂ.40 ಲಕ್ಷ ನಿಗದಿಪಡಿಸಲಾಗಿದೆ. ಕಾಲುವೆ ನಿರ್ಮಾಣದ ಭೂಸ್ವಾಧೀನಕ್ಕಾಗಿ ಖುಷ್ಕಿ ಭೂಮಿಗೆ ಪ್ರತಿ ಎಕರೆಗೆ ರೂ.25.00 ಲಕ್ಷ ಹಾಗೂ ನೀರಾವರಿ ಜಮೀನಿಗೆ ರೂ.30.00 ಲಕ್ಷ ದರವನ್ನು ನಿಗದಿಪಡಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂದು ಸದನದಲ್ಲಿ ಸರ್ವಾನುಮತದಿಂದ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ನಮ್ಮ ಹಕ್ಕಿನ ನೀರಿನ ಐತೀರ್ಪನ್ನು ಗೆಜೆಟ್‌ ಅಧಿಸೂಚನೆ ಹೊರಡಿಸುವುದರ ಜೊತೆಯಲ್ಲಿ ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಬೇಕೆಂದು ಕೇಂದ್ರ ಸರ್ಕಾರವನ್ನು ನನ್ನ ಸರ್ಕಾರವು ಒತ್ತಾಯಿಸುತ್ತದೆ”.

“ರಾಜ್ಯದಲ್ಲಿ ಹೊಸದಾಗಿ 59,181 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಏತ ನೀರಾವರಿ, ಕಾಲುವೆ ಜಾಲಗಳ ಆಧುನೀಕರಣ, ಕೆರೆ ತುಂಬಿಸುವ ಯೋಜನೆಗಳು ಹಾಗೂ ಬ್ರಿಡ್ಜ್-ಕಂ-ಬ್ಯಾರೇಜ್‌ಗಳ ನಿರ್ಮಾಣ ಸೇರಿದಂತೆ ಒಟ್ಟು ರೂ.9,331 ಕೋಟಿ ಮೊತ್ತದ 77 ಹೊಸ ಯೋಜನಾ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ”.

ದೇವಾಲಯ ಆಸ್ತಿ ಸಂರಕ್ಷಣೆಗೆ ‘ ಭೂ ವರಾಹ’ ಯೋಜನೆ- ಒತ್ತುವರಿ ತೆರವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಚಕರ ತಸ್ತೀಕ್ ಮೊತ್ತ 60 ಸಾವಿರದಿಂದ 72 ಸಾವಿರಕ್ಕೆ ಹೆಚ್ಚಿಸಿದ್ದು, ಗತಿಸಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಧಾರ್ಮಿಕ ಸೌಧ ನಿರ್ಮಾಣಕ್ಕೆ ಚಾಲನೆ ದೊರೆತಿರುವುದಾಗಿ ರಾಜ್ಯಪಾಲರ ಭಾಷಣದಲ್ಲಿ ತಿಳಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಕ್ಷೇಮಾಭಿವೃದ್ಧಿಗಾಗಿ ನೀಡಲಾಗುವ ತಸ್ತೀಕ್ ಮೊತ್ತವನ್ನು 2025-26ನೇ ಸಾಲಿನಿಂದ ರೂ.60,000 ದಿಂದ ರೂ.72,000 ಕ್ಕೆ ಹೆಚ್ಚಿಸಲಾಗಿದೆ. ಅರ್ಚಕರು ಅಥವಾ ನೌಕರರು ಸೇವಾವಧಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ರೂ.2 ಲಕ್ಷ ಗಳಂತೆ ಪರಿಹಾರ ನೀಡಲಾಗುತ್ತಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ‘ಕರ್ನಾಟಕ ಭಾರತ್‌ ಗೌರವ್‌’ ಯೋಜನೆಯಡಿ 23,044 ಯಾತ್ರಾರ್ಥಿಗಳಿಗೆ ರೂ.11.52 ಕೋಟಿ ಸಹಾಯಧನ ನೀಡಲಾಗಿದೆ. ಬೆಂಗಳೂರಿನಲ್ಲಿ ರೂ.27 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ದೇವಾಲಯಗಳ ಆಸ್ತಿ ಸಂರಕ್ಷಣೆಗಾಗಿ ‘ಭೂ ವರಾಹ’ ಯೋಜನೆಯಡಿ ಒತ್ತುವರಿ ತೆರವುಗೊಳಿಸಿ, ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ತಿಳಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...