ಸಿಎಂ ಕಚೇರಿ ಸೇರಿ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಲೈವ್ ಸ್ಟ್ರೀಮ್ ಮಾಡಲು ಕೆಆರ್‌ಎಸ್‌ ಆಗ್ರಹ

Date:

  • ‘ಸಾರ್ವಜನಿಕ ಆಡಳಿತ ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ ಸಾಧ್ಯ’
  • ‘ಪೊಲೀಸ್ ಠಾಣೆಗಳಲ್ಲಿ ಧ್ವನಿ ಮುದ್ರಣ ಸಮೇತ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇಲ್ಲ’

ಸಾರ್ವಜನಿಕ ಆಡಳಿತವು ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ ಸಾಧ್ಯ. ಈ ನಿಟ್ಟಿನಲ್ಲಿ, ಸರ್ಕಾರಿ ಕಚೇರಿಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗುವ ದೃಶ್ಯಗಳು ನಿರಂತರವಾಗಿ ಲೈವ್ ಸ್ಟ್ರೀಮ್ ಮೂಲಕ ಸಾರ್ವಜನಿಕರಿಗೆ ಮುಕ್ತವಾಗಿ ಸಿಗುವಂತಿರಬೇಕು ಎಂದು ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಆಡಳಿತದಲ್ಲಿನ ಬಹುತೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಇದು ಸಹಾಯವಾಗಲಿದೆ” ಎಂದು ತಿಳಿಸಿದ್ದಾರೆ.

“ನವೆಂಬರ್ 10ರೊಳಗೆ ನಮ್ಮ ಮನವಿಗೆ ಸ್ಪಂದಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ, ಮುಂದಾಗದಿದ್ದರೆ, ಕೆ.ಆರ್.ಎಸ್. ಪಕ್ಷವೇ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ, ಸರ್ಕಾರಿ ಕಚೇರಿಗಳಿಗೆ ಈ ವ್ಯವಸ್ಥೆ ಕಲ್ಪಿಸುವ ಕೆಲಸ ಮಾಡಲಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ರಾಜ್ಯದ ಸಾರ್ವಜನಿಕ ಆಡಳಿತವನ್ನು ಗೌಪ್ಯವಾಗಿ ನಿರ್ವಹಿಸಲು ಸರ್ಕಾರಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಇತ್ತೀಚೆಗೆ, ಪ್ರಸ್ತುತ ಸರ್ಕಾರವು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿಯನ್ನು ಪಡೆಯಲು ಅರ್ಜಿ ಹಾಕುವವರ ಮಾಹಿತಿಯನ್ನು ತನಗೆ ಕಳುಹಿಸಿಕೊಡಬೇಕೆಂದು ಎಲ್ಲ ಎಲಾಖೆಗಳಿಗೆ ಆದೇಶ ಹೊರಡಿಸಿತ್ತು. ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಯಿತು, ಈ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಸ್ಪಷ್ಟೀಕರಣ ನೀಡಿ, ಅವರ ಅರಿವಿಗೆ ಬಾರದಂತೆ, ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲ ಭಯೋತ್ಪಾದಕರೂ ಮುಸ್ಲಿಮರಲ್ಲ ಎನ್ನುವ ಸತ್ಯವನ್ನು ನಂಬದವರು

“ಅಧಿಕಾರ ದುರುಪಯೋಗ ಪಡಿಸಿಕೊಂಡು, ಅಕ್ರಮವಾಗಿ ಸರ್ಕಾರಿ ಆದೇಶ ಹೊರಡಿಸಿರುವ ಅಧೀನ ಕಾರ್ಯದರ್ಶಿಯ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಆಗಿರುವುದಿಲ್ಲ. ಇಲ್ಲಿ ಗಮನಿಸಬೇಕಾದ ಪ್ರಮುಖ ವಿಚಾರವೆಂದರೆ, ಈ ಅಧೀನ ಕಾರ್ಯದರ್ಶಿ ಸರ್ಕಾರದ ಉನ್ನತ ಅಧಿಕಾರಿ ಅಥವಾ ಮಂತ್ರಿಯ ಕುಮ್ಮಕ್ಕಿಲ್ಲದೆ ಇಂತಹ ಅಕ್ರಮ ಆದೇಶ ಹೊರಡಿಸಲು ಸಾಧ್ಯವಿಲ್ಲ. ಅಂದರೆ, ಸರ್ಕಾರದಲ್ಲಿ ಕಾಣದ ಕೈಗಳು ಮಾಹಿತಿಯನ್ನು ಬಹಿರಂಗಪಡಿಸಲು ತಡೆ ಒಡ್ಡುವ ಕೆಲಸ ಮಾಡುತ್ತಿರುವುದು ಕಂಡುಬರುತ್ತದೆ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

“ಪೊಲೀಸ್ ಠಾಣೆಗಳಲ್ಲಿ ಧ್ವನಿ ಮುದ್ರಣ ಸಮೇತ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ಆದರೆ, ನಾಮಕಾವಸ್ಥೆಗೆಂದು ಸಿಸಿಟಿವಿ ಅಳವಡಿಸಿದ್ದು, ಯಾವ ಠಾಣೆಯಲ್ಲಿಯೂ ಕೂಡ ಧ್ವನಿ ಮುದ್ರಿಸುವ ಸೌಲಭ್ಯವನ್ನು ಕಲ್ಪಿಸಿಲ್ಲ ಹಾಗೂ ಅರೆಬರೆ ವ್ಯವಸ್ಥೆಯಲ್ಲಿ ಕೇವಲ ಸಿಸಿಟಿವಿ ಅಳವಡಿಸಲಾಗಿದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...