ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಘೋಷಿಸಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ಹೊರಡುವ ಪ್ರಯಾಣಿಕರ ಅನುಕೂಲಕ್ಕಾಗಿ 1500 ಹೆಚ್ಚುವರಿ ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಬಳಿಕ, ಆಗಸ್ಟ್ 27 ಮತ್ತು 31ರಂದು ರಾಜ್ಯದ ಹಾಗೂ ಅಂತಾರಾಜ್ಯದ ಹಲವು ಪ್ರಮುಖ ನಗರಗಳಿಂದ ಬೆಂಗಳೂರಿಗೆ ಮರಳಿ ಬರುವ ಪ್ರಯಾಣಿಕರಿಗಾಗಿ ವಿಶೇಷ ಬಸ್ಸುಗಳನ್ನು ಸಂಚಾರಕ್ಕೆ ಬಿಡಲಾಗುತ್ತದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಹಲವು ಸ್ಥಳಗಳಿಗೆ ಬಸ್ಸುಗಳನ್ನು ಹೆಚ್ಚುವರಿಯಾಗಿ ಸಂಚಾರಕ್ಕೆ ಬಿಡಲಾಗುತ್ತದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ, ಕುಶಾಲನಗರ, ಪಿರಿಯಾಪಟ್ಟಣ ಮೊದಲಾದ ಕಡೆಗಳಿಗೆ ಸೇವೆ ವಿಸ್ತರಿಸಲಾಗಿದ್ದು, ತಮಿಳುನಾಡು ಹಾಗೂ ಕೇರಳದ ಮಧುರೈ, ಚೆನ್ನೈ, ಕೊಯಮತ್ತೂರು, ತ್ರಿಶೂರ್, ಏರ್ನಾಕುಲಂ ಮುಂತಾದ ಕಡೆಗಳಿಗೆ ಶಾಂತಿನಗರ ಬಸ್ ನಿಲ್ದಾಣದಿಂದ ವಿಶೇಷ ಬಸ್ಸುಗಳು ಸಂಚರಿಸಲಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಸಂದರ್ಭದಲ್ಲಿ ನೀಡಲಾಗುವ ಬಸ್ ನಿಲ್ದಾಣ ಅಥವಾ ಪಿಕ್-ಅಪ್ ಪಾಯಿಂಟ್ ವಿವರಗಳನ್ನು ಗಮನಿಸಲು ನಿಗಮವು ಮನವಿ ಮಾಡಿದೆ. ಇ-ಟಿಕೆಟ್ ಬುಕ್ಕಿಂಗ್‌ನ್ನು ನಿಗಮದ ಅಧಿಕೃತ ವೆಬ್‌ಸೈಟ್(www.ksrtc.karnataka.gov.in) ಮುಖಾಂತರ ಮಾಡಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಅದೇ ರೀತಿ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ಅಂತಾರಾಜ್ಯದ ಪ್ರಮುಖ ನಗರಗಳಲ್ಲಿರುವ ನಿಗಮದ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಸಹ ಮುಂಗಡ ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇಕಡಾ 5 ರಷ್ಟು ರಿಯಾಯಿತಿ ಮತ್ತು ಹೋಗುವ-ಬರುವ ಪ್ರಯಾಣವನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣದ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ದೊರೆಯಲಿದೆ.

ನಿಗಮವು ಹೆಚ್ಚುವರಿ ಬಸ್ಸುಗಳ ವೇಳಾಪಟ್ಟಿ ಹಾಗೂ ಅವು ಹೊರಡುವ ಸ್ಥಳಗಳ ವಿವರಗಳನ್ನು ಅಂತರ್ಜಾಲದ ಮೂಲಕ ಸಾರ್ವಜನಿಕರಿಗೆ ಲಭ್ಯವಿರಿಸಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರ ಪ್ರಯಾಣಿಕ ಒತ್ತಡವನ್ನು ಗಮನಿಸಿ, ರಾಜ್ಯದ ವಿವಿಧ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದಲೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಬಸ್ಸುಗಳನ್ನು ಸಂಚಾರಕ್ಕೆ ಬಿಡಲಾಗುವುದು ಎಂದು ನಿಗಮವು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...