ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ: ಡಿಕೆ ಶಿವಕುಮಾರ್‌ ಪ್ರಶ್ನೆ

Date:

ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಏನೂ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ” ಎಂದು ಹೇಳಿದರು.

ಇನ್ಮುಂದೆ ರಾಜ್ಯದಲ್ಲಿ ನಡೆಯಲಿರುವ ಐಟಿ ದಾಳಿಗಳು ಕುಮಾರಸ್ವಾಮಿ ಹಾಗೂ ಬಿಜೆಪಿ ಪ್ರೇರಿತ ದಾಳಿಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯ್ತು? ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿ ಇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...