ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಕೇಂದ್ರ ಸರಕಾರ ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡುವಂತೆ ರಾಜ್ಯ ಸರಕಾರ ಶಿಫಾರಸು ಮಾಡಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಯುಗದ ಕವಿ,ಜಗದ ಕವಿ ಎಂದೇ ಖ್ಯಾತರಾಗಿರುವ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಕೇಳದವರಿಲ್ಲ. ಅವರು ಕನ್ನಡ ಸಾಹಿತ್ಯ, ಸಂಸ್ಕೃತಿಯ ಶತ ಪುರುಷರೂ ಆಗಿದ್ದು,ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡಲು ಕೇಂದ್ರಕ್ಕೆ ರಾಜ್ಯವು ಶಿಫಾರಸು ಮಾಡಿದೆ ಎಂದು ನುಡಿದರು.





