ಚುನಾವಣೆ ಹೊಸ್ತಿಲಲ್ಲಿ ಬಸ್‌ಗಳ ಕೊರತೆ; ಪರದಾಡಿದ ಕರಾವಳಿಗರು

Date:

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಯಲ್ಲಿ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಒಂದು ದಿನಕ್ಕೂ ಮುನ್ನ (ಏಪ್ರಿಲ್ 25) ಕರಾವಳಿಗರು ಬೆಂಗಳೂರಿನಿಂದ ಮಂಗಳೂರಿಗೆ ತಲುಪಲು ಮತ್ತು ಸ್ಥಳೀಯವಾಗಿ ಪ್ರಯಾಣಿಸಲು ಬಸ್‌ಗಾಗಿ ಪರದಾಡಬೇಕಾಯಿತು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ದಕ್ಷಿಣ ಕನ್ನಡದಾದ್ಯಂತ ಅದರಲ್ಲೂ ಗ್ರಾಮೀಣ ಭಾಗದ ಜನರು ಬಸ್‌ಗಳ ಕೊರತೆಯಿಂದ ತೊಂದರೆಗೆ ಒಳಗಾದರು.

ಇನ್ನು ಬೆಂಗಳೂರಿನಲ್ಲಿ ಕರಾವಳಿಯ ಹಲವಾರು ಮಂದಿ ಮತದಾನದ ತಮ್ಮ ಹಕ್ಕನ್ನು ಚಲಾಯಿಸಲು ಮಂಗಳೂರಿಗೆ ತಲುಪಲು ಒದ್ದಾಡುವಂತಾಗಿತ್ತು. ಒಂದೆಡೆ ಬಸ್‌ಗಳಲ್ಲಿ ಟಿಕೆಟ್ ದರವು 1600ರಿಂದ ಆರಂಭವಾಗಿ ಮೂರು ಸಾವಿರ ರೂಪಾಯಿವರೆಗೆ ಇದ್ದರೆ, ಬಸ್‌ನಲ್ಲಿ ಸೀಟುಗಳ ಕೊರತೆ ಕೂಡಾ ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ಏಪ್ರಿಲ್ 25ರ ಸಂಜೆಯಾಗುತ್ತಿದ್ದಂತೆ ಮಂಗಳೂರು, ಉಡುಪಿ, ಹಾಸನ ಭಾಗಗಳಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳನ್ನು ಹೊರಡಿಸಲಾಗಿದ್ದು, ಪ್ರಯಾಣಿಕರಿಗೆ ಇದು ಕೊಂಚ ರಿಲೀಫ್ ನೀಡಿದೆ. ಆದರೂ ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ತಮ್ಮ ಬಸ್‌ಗಾಗಿ ನಿಗದಿ ಪಡಿಸಿದ ಸಮಯಕ್ಕಿಂತ ಎರಡು ತಾಸು ಹೆಚ್ಚು ಕಾಲ ಜನರು ಕಾಯಬೇಕಾದ ಸ್ಥಿತಿ ಉಂಟಾಗಿತ್ತು.

ಇನ್ನು ಕರಾವಳಿಯ ಉಜಿರೆಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು, ವಯೋವೃದ್ಧರು ಸೇರಿದಂತೆ ಜನರು ಸ್ಥಳೀಯ ಬಸ್‌ಗಾಗಿ ಕಾಯುತ್ತಿರುವ ವಿಡಿಯೋ, ಆಡಿಯೋ ವೈರಲ್ ಆಗಿದೆ. “ನಾವು ಸಂಜೆ 4 ರಿಂದ ಒಂದು ಗಂಟೆಗೂ ಅಧಿಕ ಕಾಲ ಬಸ್ ನಿಲ್ದಾಣದಲ್ಲಿ ಕಾದೆವು. ಆದರೆ ಬಸ್ ಸಿಗಲಿಲ್ಲ” ಎಂದು ಜನರು ಹೇಳಿಕೊಂಡಿದ್ದಾರೆ.

ಇನ್ನು ಇತರೆ ರಾಜ್ಯಗಳಲ್ಲೂ ಚುನಾವಣೆ ವೇಳೆ ಇಂತಹ ಸಮಸ್ಯೆ ಉಂಟಾಗಿದೆ. ಪಶ್ಚಿಮ ರಾಜಸ್ಥಾನದ ಪಾಲಿ ಲೋಕಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಇಲ್ಲಿನ ಹಾಲಿ ಸಂಸದ ಬಿಜೆಪಿಯ ಪಿಪಿ ಚೌಧರಿ ಸಂಗೀತಾ ಬೇನಿವಾಲ್‌ ಅವರಿಗೆ ಈ ನೀರಿನ ಸಮಸ್ಯೆ ಚುನಾವಣೆ ಹೊಸ್ತಿಲಲ್ಲಿ ದೊಡ್ಡ ಸವಾಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...