ರೈತರಿಗೆ ಶಾಶ್ವತ ಪರಿಹಾರ ನೀಡಲು ಭೂ ಮರು ಮಾಪನ: ಕಂದಾಯ ಸಚಿವ ಕೃಷ್ಣಬೈರೇಗೌಡ

Date:

  • ರಾಮನಗರದಲ್ಲಿ ಪ್ರಾಯೋಗಿಕ ಭೂ ಮರು ಮಾಪನಾ ಕಾರ್ಯ
  • ಶತಮಾನಗಳ ಭೂ ವ್ಯಾಜ್ಯಕ್ಕೆ ತೆರೆ ಎಳೆಯಲು ಸರ್ಕಾರ ಯತ್ನ

ಭೂ ಸರ್ವೇ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ, ಪರಿಣಾಮ ರೈತರೂ ಸಹ ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ರೀ ಸರ್ವೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯಲ್ಲಿ ಬುಧವಾರ ಭೂ ಮರು ಮಾಪನ (ರೀ ಸರ್ವೇ) ಪ್ರಾಯೋಗಿಕ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಸರ್ವೇ ನಂಬರ್ ಡಿಸ್ಪ್ಯೂಟ್ ಎಂಬುದು ಇತ್ತೀಚೆಗೆ ರೈತರ ಪಾಲಿನ ಸಾಮಾನ್ಯ ಸಮಸ್ಯೆಯಾಗಿದೆ. ತಮ್ಮದಲ್ಲದ ತಪ್ಪಿಗೆ ದಿನಂಪ್ರತಿ ಸರ್ಕಾರಿ ಕಚೇರಿಯನ್ನು ಅಲೆಯುವಂತಾಗಿದೆ” ಎಂದು ವಿಷಾದಿಸಿದರು.

“ರೈತರ ಈ ಪರಿಸ್ಥಿತಿಗೆ ಸರ್ವೇ ಇಲಾಖೆಯಲ್ಲಿನ ಸಮಸ್ಯೆಯೇ ಕಾರಣ. ಬ್ರಿಟಿಷರ ಕಾಲದಲ್ಲಿ 1925 ರಲ್ಲಿ ನಡೆದ ಭೂ ಸರ್ವೇಯನ್ನೇ ಆಧಾರವಾಗಿಟ್ಟುಕೊಂಡು ನಾವು ಈಗಲೂ ವ್ಯವಹರಿಸುತ್ತಿದ್ದೇವೆ. ಇದೇ ಕಾರಣಕ್ಕೆ ಇದೀಗ ಭೂ ರೀ ಸರ್ವೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಇದು ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ಕೃಷಿ ಮತ್ತು ಅರಣ್ಯ ಭೂಮಿಯನ್ನು ರೀ ಸರ್ವೇ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ರೀ ಸರ್ವೇ ಲಾಭವೇನು?

ಪ್ರತಿ ಹಳ್ಳಿಯ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳಿಗೆ ಸಂಬಂಧಿಸಿದಂತೆ ಈಗ ಸರ್ಕಾರದ ಬಳಿ ಇರುವುದು ನೂರು ವರ್ಷಗಳ ಹಳೆಯ ದಾಖಲೆ.

ಆದರೆ ಈ ನೂರು ವರ್ಷದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಪ್ರತಿಯೊಂದು ಗ್ರಾಮಠಾಣಾ ಹಾಗೂ ಸರ್ವೇ ನಂಬರ್ ಗಡಿಯಲ್ಲೂ ವ್ಯತ್ಯಾಸಗಳಿವೆ. ಈ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿ ನಿಖರ ವಿವರಣೆ ಇಲ್ಲ.

ಇದಲ್ಲದೆ, ಸರ್ಕಾರಿ ಭೂ ಒತ್ತುವರಿ ಜಮೀನು ಯಾವುದು? ಹಾಗೂ ಅರಣ್ಯ ಪ್ರದೇಶದ ಗಡಿಯ ಬಗ್ಗೆಯೂ ಸಾಕಷ್ಟು ಗೊಂದಲ ಇದೆ. ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುವ ಸಲುವಾಗಿಯೇ ಇದೀಗ ತಾಂತ್ರಿಕ ಭೂ ರೀ ಸರ್ವೇಗೆ ಚಾಲನೆ ನೀಡಲಾಗಿದೆ.

ಡ್ರೋನ್ ತಂತ್ರಜ್ಞಾನದ ಮೂಲಕ ಭೂ ರೀ ಸರ್ವೇ ನಡೆಸಲಾಗುತ್ತಿದೆ. ಡ್ರೋನ್ ಪ್ರತಿ ಚ.ಕಿಲೊಮೀಟರ್ ಗೆ 4000 ಕ್ಕೂ ಅಧಿಕ ಫೋಟೊ ತೆಗೆಯುತ್ತದೆ. ಈ ಫೋಟೊಗಳ ಆಧಾರದಲ್ಲಿ ವೈಜ್ಞಾನಿಕವಾಗಿ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳನ್ನು ಗುರುತಿಸಲಾಗುವುದು. ಈ ಮೂಲಕ ರೈತರ ಸರ್ವೇ ಡಿಸ್ಪ್ಯೂಟ್ ಗಳಿಗೆ ಶಾಶ್ವತ ಪರಿಹಾರ ಹಾಗೂ ಸರ್ಕಾರಿ ಭೂಮಿ ಗುರುತಿಸಿ ಒತ್ತುವರಿ ತೆರವು ಮಾಡಲು ಸಹಕಾರಿಯಾಗುವುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...