ವಿಧಾನ ಪರಿಷತ್ ನಾಮನಿರ್ದೇಶನ: ನಾಲ್ಕು ಸ್ಥಾನಗಳಿಗೆ ಹೆಸರು ಫೈನಲ್‌, ಅಧಿಕೃತ ಘೋಷಣೆ ಮಾತ್ರ ಬಾಕಿ

Date:

ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ.

ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಮಾಜಿ ಎಂಎಲ್‌ಸಿ ರಮೇಶ್ ಬಾಬು ಹಾಗೂ ಎನ್‌ಆರ್‌ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಹೈಕಮಾಂಡ್‌ ಕಡೆಯಿಂದ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರೊಂದಿಗೆ ವಿಧಾನ ಪರಿಷತ್‌ನ ನಾಮನಿರ್ದೇಶನ ಸ್ಥಾನ ಭರ್ತಿ ವಿಚಾರವಾಗಿ ಸಾಕಷ್ಟು ಚರ್ಚೆಯ ಬಳಿಕ ಈ ನಾಲ್ಕು ಹೆಸರುಗಳು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಸಮುದಾಯದ ಸಮೀಕರಣದ ಮೇಲೆ ನಾಯಕರ ಆಯ್ಕೆ ಪರಿಗಣಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ್‌ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದರು. ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವಾಗ ಮುಖ್ಯವಾಗಿ ಒಕ್ಕಲಿಗ, ಇತರೆ ಹಿಂದುಳಿದ ವರ್ಗಗಳು ಹಾಗೂ ದಲಿತ ಸಮುದಾಯಕ್ಕೆ ಒತ್ತು ಕೊಡಬೇಕು ಎಂದು ಹೈಕಮಾಂಡ್‌ ಮುಂದೆ ಸಿದ್ದರಾಮಯ್ಯ ಮನವಿ ಮಾಡಿದ್ದರು.

ಆರಂಭದಲ್ಲಿ ಒಕ್ಕಲಿಗ ಸಮುದಾಯದಿಂದ ಬಿ.ಎಲ್‌.ಶಂಕರ್‌, ರಘುನಂದನ್‌ ರಾಮಣ್ಣ ಹಾಗೂ ವಿನಯ್‌ ಕಾರ್ತಿಕ್‌ ಹೆಸರುಗಳು ಮುನ್ನೆಲೆಗೆ ಬಂದಿವೆ. ಇನ್ನು ಒಬಿಸಿ ಸಮುದಾಯದಿಂದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮತ್ತು ಈಡಿಗ ಸಮುದಾಯದ ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್‌ ಅಮಿನ್‌ಮಟ್ಟು ಹಾಗೂ ಹಿಂದುಳಿಗ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್‌ ದ್ವಾರಕಾನಾಥ್ ಅವರ ಹೆಸರು ಪ್ರಸ್ತಾಪವಾಗಿತ್ತು. ಹಾಗೆಯೇ ದಲಿತ ಸಮುದಾಯದಿಂದ ಡಿ.ಜಿ.ಸಾಗರ್ ಅಥವಾ ಮೈಸೂರು ಮೂಲದ ಪತ್ರಕರ್ತ ಶಿವಕುಮಾರ್ ಅವರನ್ನು ಪರಿಗಣಿಸುವಂತೆ ಸೂಚಿಸಲಾಗಿತ್ತು.

ಈಗ ಅಂತಿಮವಾಗಿ ಡಿ.ಜಿ.ಸಾಗರ್, ದಿನೇಶ್ ಅಮಿನ್‌ಮಟ್ಟು, ರಮೇಶ್ ಬಾಬು ಹಾಗೂ ಆರತಿ ಕೃಷ್ಣ ಹೆಸರುಗಳು ಹೈಕಮಾಂಡ್‌ ಕಡೆಯಿಂದ ಫೈನಲ್ ಆಗಿದೆ ಎಂದು ಮೂಲಗಳು ಖಚಿತಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...