ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಬಿಜೆಪಿ ಸಾಬೀತುಪಡಿಸಲಿ: ಸಿದ್ದರಾಮಯ್ಯ ಸವಾಲು

Date:

  • ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬರ ಪರಿಹಾರ ನೀಡಲು ಕೇಂದ್ರ ವಿಳಂಬ ನೀತಿ ತೋರುತ್ತಿದೆ; ಇದಕ್ಕೆ ಕಾರಣವೇನು?

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.

“ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದಾರೆ. ಇದರಲ್ಲಿ 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದ್ದು, ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಹಣ ಒದಗಿಸಲು ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4.34 ಕೋಟಿ ಜನರಿಗೆ ಪ್ರತಿ ಮಾಹೆ 170 ರೂ. ನೀಡಲಾಗುತ್ತಿದೆ. ಇದುವರೆಗೆ 1.50 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳು ಎಂದು ಬಿಜೆಪಿಯವರು ಸಾಬೀತುಪಡಿಸಲಿ” ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜನಸ್ಪಂದನ | ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳಿಂದ ಅಧಿಕಾರಿಗಳಿಗೆ ಹದಿನೈದು ದಿನಗಳ ಗಡುವು

ಕೇಂದ್ರದ ವಿಳಂಬಕ್ಕೆ ಕಾರಣವೇನು?

ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಉತ್ತರಿಸಿ, “ರಾಜ್ಯದಿಂದ ಪಡೆದ ಹಣವನ್ನೇ ಕೇಂದ್ರ ಸರ್ಕಾರ ಪರಿಹಾರವಾಗಿ ನೀಡುತ್ತದೆ. ಈ ಪರಿಹಾರವನ್ನು ನೀಡಲು ಕೇಂದ್ರ ವಿಳಂಬ ನೀತಿ ತೋರುತ್ತಿದೆ. ಈ ವಿಳಂಬಕ್ಕೆ ಕಾರಣವೇನು ? ಕರ್ನಾಟಕದಿಂದ ಸುಮಾರು 4 ಲಕ್ಷ ಕೋಟಿ ತೆರಿಗೆ ಹಣ ಕೇಂದ್ರಕ್ಕೆ ತಲುಪಿದರೂ, ರಾಜ್ಯಕ್ಕೆ ಪರಿಹಾರವಾಗಿ ಕೇವಲ 50 ರಿಂದ 60 ಸಾವಿರ ಕೋಟಿ ಬರುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...