ಮದ್ಯ ದರ ಇಳಿಕೆ, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ

Date:

ದುಬಾರಿ ಬೆಲೆಯ ಸ್ಕಾಚ್, ವಿಸ್ಕಿ ಸೇರಿದಂತೆ ಎಲ್ಲ ಪ್ರೀಮಿಯಂ ಮದ್ಯ ಮಾರಾಟ ದರವನ್ನು ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ.

ರಾಜ್ಯಾದ್ಯಂತ ನೂತನ ದರಗಳು ಮಂಗಳವಾರ ಮಧ್ಯರಾತ್ರಿಯಿಂದ ಜಾರಿಗೆ ಬರುತ್ತಿದ್ದು, ಎಲ್ಲ ಪ್ರೀಮಿಯಂ ಮದ್ಯದ ದರ ಶೇ.15ರಿಂದ ಶೇ.20ರಷ್ಟು ದರ ಇಳಿಕೆ ಆಗಲಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಹೋಲಿಸಿದರೆ ನೆರೆಯ ರಾಜ್ಯಗಳಲ್ಲಿ ಪ್ರೀಮಿಯಂ ಮದ್ಯ ಮಾರಾಟದರ ಕಡಿಮೆ ಇದೆ ಇದರಿಂದ ಗಡಿ ಪ್ರದೇಶದ ರಾಜ್ಯದ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿಲ್ಲ. ಅಲ್ಲದೆ ಭಾರೀ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಕೂಡ ನಡೆಯುತ್ತಿದೆ ಎಂಬ ವರದಿಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ಪ್ರಕಟಿಸಿದ್ದರು.

ಅದರಂತೆ ದುಬಾರೆ ಬೆಲೆಯ ಮಧ್ಯ ಮಾರಾಟ ದರ ಇಳಿಕೆ ಮಾಡಿ ಜೂನ್‌ನಲ್ಲೇ ಕರಡು ಅಧಿಸೂಚನೆ ಹೊರಡಿಸಿದ್ದ ಅಬಕಾರಿ ಇಲಾಖೆ, ಜುಲೈ 1ರಿಂದ ದರ ಇಳಿಕೆಗೆ ಮುಂದಾಗಿತ್ತು. ಆದರೆ ಆಗ ಗ್ಯಾರಂಟಿ ಯೋಜನೆ ಸೇರಿದಂತೆ ಕಾರಣಗಳಿಂದ ಸಂಪನ್ಮೂಲ ಕೊರತೆ ಎದುರಿಸುತ್ತಿದ್ದ ಆರ್ಥಿಕ ಇಲಾಖೆಯ ಸೂಚನೆಯಂತೆ ದರ ಪರಿಷ್ಕರಣೆ ತಡೆ ಹಿಡಿಯಲಾಗಿತ್ತು.

ಇದೀಗ ಬದಲಾದ ಲೆಕ್ಕಾಚಾರದಂತೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿರುವ ಅಬಕಾರಿ ಇಲಾಖೆ, ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಪರಿಷ್ಕರಿಸಿ ಆಗಸ್ಟ್‌ 23ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಪರಿಷ್ಕೃತ ದರಗಳು ಇಂದಿನಿಂದಲೇ ರಾಜ್ಯದಾದ್ಯಂತ ಜಾರಿಗೆ ಬರಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...