ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್‌ ಸೇರಿ ಮೂವರ ಮೇಲೆ ಲೋಕಾಯುಕ್ತ ದಾಳಿ

Date:

ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್‌ (ಎಇಇ) ಸೈಯದ್ ಅಜ್ಗರ್ ಹಾಗೂ ಸಿಬ್ಬಂದಿಯಾದ ಗೋವಿಂದಯ್ಯ ಟಿ ದಾಸರಹಳ್ಳಿ ಮತ್ತು ಸತೀಶ್ ಹರಿಣಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಿಚಾರಣೆ ನಡೆಸಿದ್ದಾರೆ.

ಯಲಹಂಕ ನ್ಯೂ ಟೌನ್ ನಿವಾಸಿ ಕೆ ಎಸ್ ಚಂದ್ರಶೇಖರ್ ಆಜಾದ್ ದೂರಿನ ಮೇಲೆ ಈ ದಾಳಿ ನಡೆದಿದೆ.

ಯಲಹಂಕ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಜರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಗೃಹ ಮಂಡಳಿ ಕಚೇರಿ ಯಲಹಂಕ ನ್ಯೂ ಟೌನ್ ಸೈಟ್ ನಂಬರ್ 271 ಎ ಸೆಕ್ಟರ್ ಸಂಬಂಧಿಸಿದಂತೆ ದಾಖಲಾತಿಗಳನ್ನು ಸೃಷ್ಟಿಸಿ a1 ಆರೋಪಿಯು a2 ಮತ್ತು a3 ರವರೊಂದಿಗೆ ಸೇರಿಕೊಂಡು ಸರ್ಕಾರಕ್ಕೆ 10 ಕೋಟಿ ರೂ.ಗಳನ್ನು ನಷ್ಟ ಮಾಡಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೊ ಸo 36/2025 ಕಲo 13(1)(a) r/w 13(2) ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ 1988 ( ತಿದ್ದುಪಡಿ ಅಧಿನಿಯಮ 2018 ) ಮತ್ತು 409, 420,468, 471, r/w 120b ಐಪಿಸಿಯಡಿ ದೂರು ದಾಖಲಾಗಿದೆ.

ದಾಳಿ ಮಾಡಿದ ಅಧಿಕಾರಿಗಳ ತಂಡ

1) ಪ್ರದೀಪ್ ಕುಮಾರ್ ಡಿವೈಎಸ್ಪಿ, ಗೋವಿಂದರಾಜು ಮತ್ತು ರಾಜಶೇಖರಯ್ಯ ಪಿ ಐ ರವರುಗಳೊಂದಿಗೆ ಕರ್ನಾಟಕ ಗೃಹ ಮಂಡಳಿ ಯಲಹಂಕ ನ್ಯೂ ಟೌನ್ ಕಚೇರಿಗೆ ವಾರೆಂಟ್ ನೊಂದಿಗೆ ದಾಳಿ ಮಾಡಿ ಸೈಟ್ ನಂಬರ್ 271 ಎ ಸೆಕ್ಟರ್ ಮತ್ತು 238 ಬಿ ಸೆಕ್ಟರ್ ಸಂಬಂಧಿಸಿದಂತೆ ಮೂಲ ಪ್ರತಿಗಳು ಹಾಗೂ ವಿವಿಧ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.

2) ವಸಂತು ಸಿ ಡಿವೈಎಸ್ಪಿ, ಅಡ್ವಿಶಪ್ಪ ಎಸ್ ಗುಡಿಗೊಪ್ಪ ಮತ್ತು ಗೋವಿಂದ ಗೌಡ ಪಾಟೀಲ್ ಪಿ ಐ ರವರುಗಳೊಂದಿಗೆ ಎ1 ಆರೋಪಿ ಸೈಯದ್ ಅಜ್ಗರ್ ಎಇಇ ಆರ್ ಟಿ ನಗರ ರವರ ಮನೆ ಮೇಲೆ ವಾರೆಂಟ್ ನೊಂದಿಗೆ ದಾಳಿ ನಡೆಸಿ, ಸೈಟ್‌ಗೆ ಸಂಬಂಧಿಸಿದಂತೆ ದಾಖಲೆ ವಶಪಡಿಸಿಕೊಂಡಿದ್ದಾರೆ.

3) ವಿಶ್ವನಾಥ್ ದುಂಡಪ್ಪ ಕಬುರಿ ಮತ್ತು ಬಸವರಾಜ್ ಜಿ ಪುಲಾರಿ ಪಿ ಐ ರವರು ಎ2 ಆರೋಪಿ ಗೋವಿಂದಯ್ಯ ರವರ ಮನೆ ಮೇಲೆ ವಾರೆಂಟ್ ನೊಂದಿಗೆ ದಾಳಿ ಮಾಡಲಾಗಿ ಸೈಟಿಗೆ ಸಂಬಂಧಿಸಿದ ನ್ಯಾಯಾಲಯದಲ್ಲಿ ದಾವೆ ಹೂಡಿದ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...