ಕಾರಜೋಳ ಮೇಲೆ ಹಲ್ಲೆ ಯತ್ನದ ಹಿಂದೆ ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ: ಪಿ ರಾಜೀವ್ ಆರೋಪ

Date:

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವೆ. ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು ಮಾಡಿರುವುದರಲ್ಲಿ ಡಾ.ಎಚ್.ಸಿ.ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ದಲಿತರಿಗೆ ಮೀಸಲಿಟ್ಟ ಹಣವನ್ನು ಈ ಸರಕಾರ ದುರ್ಬಳಕೆ ಮಾಡಿದೆ. ಇದು ದಲಿತ ಸಮುದಾಯಗಳಿಗೆ ಅರ್ಥ ಆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುವ ಭಯ ಸರಕಾರ, ಕಾಂಗ್ರೆಸ್ಸನ್ನು ಕಾಡುತ್ತಿದೆ” ಎಂದರು.

“ದಲಿತರಿಗೆ ಈ ವಿಚಾರ ಗೊತ್ತಾಗಬಾರದು; ಯಾರೂ ಇದನ್ನು ತಿಳಿಸಬಾರದೆಂಬ ದುರುದ್ದೇಶದೊಂದಿಗೆ ಕಾಂಗ್ರೆಸ್ ಪಕ್ಷವು ಕಾರಜೋಳರ ಮೇಲೆ ಹಲ್ಲೆಗೆ ಪ್ರೇರಣೆ ಕೊಟ್ಟಿದೆ. ತೆರೆಮರೆಯ ಕೆಲಸ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ ಎಸ್‍ಇಪಿಟಿಎಸ್‍ಪಿಯಡಿ 2,400 ಕೋಟಿ ಇಟ್ಟಿದ್ದಾರೆ. ಅದೇರೀತಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಡಿ 2,800 ಕೋಟಿ ಇಟ್ಟಿದ್ದಾರೆ. ಈ 2,800 ಕೋಟಿ ಹಣದಲ್ಲಿ ಶೇ 90 ದಲಿತರಿಗೆ ಪ್ರಯೋಜನ ಸಿಗುತ್ತದೆ. ಹಾಗಿದ್ದರೆ 2400 ಕೋಟಿಯನ್ನು ಮತ್ತೆ ಇಟ್ಟಿದ್ಯಾಕೆ” ಎಂದು ಪ್ರಶ್ನಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಇದೆಲ್ಲವೂ ದಲಿತ ಸಮುದಾಯ, ದಲಿತ ಮುಖಂಡರಿಗೆ ತಿಳಿದರೆ ಈ ಸರಕಾರವು ಸುಮಾರು 10 ಸಾವಿರ ಕೋಟಿ ಹಣವನ್ನು ದಲಿತ ಸಮುದಾಯಕ್ಕಾಗಿ ಮತ್ತೆ ಕೊಡಬೇಕಾಗುತ್ತದೆ. ಅದೇ ಭಯ ಸಿದ್ದರಾಮಯ್ಯರನ್ನೂ ಕಾಡುತ್ತಿದೆ. ದಲಿತರು ಜಾಗೃತ ಆಗಬಾರದು. ಈ ಸಂಬಂಧ ತಿಳಿವಳಿಕೆ ಕೊಡುವ ಕೆಲಸವನ್ನು ಮಾಡಬಾರದೆಂಬ ಉದ್ದೇಶದಿಂದ ಭಯ ಹುಟ್ಟಿಸಲು ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ಸಮುದಾಯದ ದೊಡ್ಡ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಹಲ್ಲೆ ಮಾಡಿ, ಆ ಮೂಲಕ ದಲಿತ ಜಾಗೃತ ಮನಸ್ಸುಗಳಿಗೆ ಸಂದೇಶ ಕೊಡಲು ಹೊರಟಿದ್ದರು” ಎಂದು ವಿಶ್ಲೇಷಿಸಿದರು.

“ಸದನದಲ್ಲಿ ಮಹದೇವಪ್ಪ ಅವರು ದಲಿತರ ದಾರಿತಪ್ಪಿಸುವ ಉತ್ತರ ಕೊಟ್ಟಿದ್ದಾರೆ. 11 ಸಾವಿರ ಕೋಟಿ ಹಣವನ್ನು ದಲಿತರಿಗಾಗಿ ಬಳಸುವಂತಾಗಲು ತೀವ್ರತರದ ಹೋರಾಟ ಮಾಡುತ್ತೇವೆ. ದಲಿತ ಮುಖಂಡರು, ದಲಿತ ಸಂಘಟನೆಗಳು, ದಲಿತ ಶಾಸಕರಿಗೆ ಮಾಹಿತಿ, ಅಂಕಿ ಸಂಖ್ಯೆ ಕೊಟ್ಟು ಸರಕಾರ ಮಾಡಿದ ಅನ್ಯಾಯದ ವಿವರ ನೀಡಿ ಆಂದೋಲನ ರೂಪಿಸಲಿದ್ದೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...