ದುರಾಡಳಿತ ಎಂಬ ಪಿಡುಗು ಲೋಕಾಯುಕ್ತ ಸಂಸ್ಥೆಯನ್ನು ನಿಶ್ಯಕ್ತಗೊಳಿಸಿದೆ: ನ್ಯಾ. ಬಿ ಎಸ್ ಪಾಟೀಲ್‍

Date:

  • ‘1074 ಪ್ರಕರಣಗಳು ಇನ್ನೂ ಸರ್ಕಾರದ ಹಂತದಲ್ಲಿ ಬಾಕಿ ಇವೆ’
  • ‘ಭ್ರಷ್ಟಾಚಾರ ತಡೆಗೆ ಇಲಾಖಾ ಮುಖ್ಯಸ್ಥರು ಸಹ ಮುಂದಾಗಬೇಕು’

ದುರಾಡಳಿತ ಎಂಬ ಪಿಡುಗು ಲೋಕಾಯುಕ್ತ ಸಂಸ್ಥೆಯನ್ನು ನಿಶ್ಯಕ್ತಗೊಳಿಸಿದೆ. ಲೋಕಾಯುಕ್ತಕ್ಕೆ ಆಘಾತಕಾರಿ ಪರಿಣಾಮಗಳನ್ನು ತಂದೊಡ್ಡಿದೆ. ನಮ್ಮ ಸಂಸ್ಥೆಯಿಂದ ಅನೇಕ ಸರ್ಕಾರಿ ಕಚೇರಿಗಳ ಮತ್ತು ಸಂಸ್ಥೆಗಳ ಮೇಲೆ ದಾಳಿ ನಡೆಸಿ ವಿಚಾರಣೆಯನ್ನು ಕೈಗೊಂಡು ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡಲಾಗಿದೆ. ಆದರೆ, ಈ ಬಗ್ಗೆ ಸೀಮಿತ ಫಲಿತಾಂಶ ಮಾತ್ರ ಬಂದಿದೆ. ಹೀಗಾಗಿ ಸಮಗ್ರ ಬದಲಾವಣೆ ಅಗತ್ಯವಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್‍ ಅಭಿಪ್ರಾಯ ಪಟ್ಟರು.

2023ನೇ ಸಾಲಿನ ಜಾಗೃತ ಅರಿವು ಸಪ್ತಾಹದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಹುನಗುಂದ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭವನ್ನು ಪ್ರಸ್ತಾಪಿಸಿ, “ಸದರಿ 30 ಹಾಸಿಗೆಗಳ ಹೆರಿಗೆ ಆಸ್ಪತ್ರೆಯಲ್ಲಿ ಎಲ್ಲ ಸವಲತ್ತು ನೀಡಿದ್ದರೂ ಸಹ ಯಾವುದೇ ವೈದ್ಯರು ಅಲ್ಲಿ ನಿಯೋಜನೆಯಾಗಿಲ್ಲ. ಹೆರಿಗೆಗಾಗಿ ಬಂದ ಗರ್ಭಿಣಿ ಸ್ತ್ರೀಯರು ಪರದಾಡುವುದನ್ನು ಗಮನಿಸಿ, ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡು ಸರ್ಕಾರದ ಗಮನವನ್ನು ಸೆಳೆದಾಗ ಸರ್ಕಾರವು ಕೂಡಲೇ ಸ್ಪಂದಿಸಿ, ವೈದ್ಯರನ್ನು ನಿಯೋಜಿಸಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಾಯುಕ್ತ ಸಂಸ್ಥೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಸಂಸ್ಥೆಯಿಂದ ಮಾತ್ರವೇ ಭ್ರಷ್ಟಾಚಾರವನ್ನು ಹೋಗಲಾಡಿಸಲು ಅಥವಾ ದುರಾಡಳಿತವನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯಿಂದ, ಇಲಾಖಾ ಮುಖ್ಯಸ್ಥರು ಸಹ ಮುಂದಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

“ದೂರುಗಳ ಬಗ್ಗೆ ತನಿಖೆ ಕೈಗೊಂಡು ಮೇಲ್ನೋಟಕ್ಕೆ ಆಪಾದನೆಗಳು ಸತ್ಯವೆಂದು ಕಂಡುಬಂದ ಪ್ರಕರಣಗಳಲ್ಲಿ ಕಳುಹಿಸಲಾದ ಅನೇಕ ಶಿಫಾರಸ್ಸುಗಳು ಸರ್ಕಾರದ ಮಟ್ಟದಲ್ಲಿಯೇ ಬಾಕಿ ಉಳಿದಿವೆ, ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಗಮನ ಹರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಕೋರಿದರು.

“ಇಲಾಖಾ ವಿಚಾರಣೆ ಪ್ರಕರಣಗಳಲ್ಲಿ ಆಪಾದನೆಗಳು ಸಾಬೀತಾಗಿ ದಂಡನೆ ವಿಧಿಸಲು ಶಿಫಾರಸ್ಸು ಮಾಡಲಾದ 1074 ಪ್ರಕರಣಗಳು ಇನ್ನೂ ಸರ್ಕಾರದ ಹಂತದಲ್ಲಿ ಬಾಕಿ ಇವೆ. ಶಿಫಾರಸ್ಸು ಮಾಡಲಾದ ಒಂದು ಪ್ರಕರಣದಲ್ಲಿ ಆಪಾದಿತ ಅಧಿಕಾರಿಯ ಸೇವೆಯು ಇನ್ನೂ ಎರಡು ವರ್ಷಗಳಿದ್ದಾಗಲೇ ಮಾಡಿದ್ದರೂ ಸಹ ಆ ಅಧಿಕಾರಿಯು ನಿವೃತ್ತಿಯಾಗುವವರೆವಿಗೂ ಯಾವುದೇ ಕ್ರಮ ಕೈಗೊಳ್ಳದೇ, ನಿವೃತ್ತಿಯ ನಂತರ ಅವರ ಪಿಂಚಣಿಯನ್ನು ತಡೆಹಿಡಿಯಲಾಗಿದೆ. ಆ ಅಧಿಕಾರಿಯು ಎರಡು ವರ್ಷಗಳ ಕಾಲ ಸೇವೆಯಲ್ಲಿ ಮುಂದುವರೆದಿದ್ದು, ದುರಾಡಳಿತಕ್ಕೆ ಹಿಡಿದ ಕನ್ನಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...