ಮಂಡ್ಯ | ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಬಾರದ ಕಸಾಪ ಅಧ್ಯಕ್ಷ ಜೋಶಿ- ಪ್ರತಿಭಟನೆ

Date:

ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮುದ್ರಿಸಲಾದ ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಗೈರಾಗಿರುವುದನ್ನು ಖಂಡಿಸಿ ಕನ್ನಡ ಪರ, ಸಾಹಿತ್ಯ, ಸಂಘ – ಸಂಸ್ಥೆಗಳ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಚಿಸಿರುವ ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಶುಕ್ರವಾರ (ಮೇ 9) ಸಂಜೆ 4 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೆ ಸಮಯ ನಿಗದಿ ಪಡಿಸಲಾಗಿತ್ತು. ಈ ಸಭೆಗೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಗೈರಾಗಿದ್ದು ಕನ್ನಡ ಪರ, ಸಾಹಿತ್ಯ, ಸಂಘ – ಸಂಸ್ಥೆಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರೊ. ಜಯಪ್ರಕಾಶ್ ಗೌಡ, ಕಸಪಾ ಅಧ್ಯಕ್ಷ ಮಹೇಶ್‌ ಜೋಶಿ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಡಳಿತ ಸಂಚಿಕೆಯನ್ನು ಹೊರ ತರಬೇಕು. ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಜೋಶಿ ಅವರು ವೆಚ್ಚ ಮಾಡಿದ 2.50 ಕೋಟಿ ರೂ. ಗೆ ಇನ್ನೂ ಲೆಕ್ಕ ಕೊಟ್ಟಿಲ್ಲ. ಈ ನಡುವೆ ಅವರು ಮುಂದಿನ ವರ್ಷ ಬಳ್ಳಾರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 40 ಕೋಟಿ ರೂ. ಅವಶ್ಯಕತೆ ಇದೆ ಎಂದು ಪ್ರಸ್ತಾಪ ಸಲ್ಲಿಸಿದ್ದಾರೆ. ಕೂಡಲೇ ಜೋಶಿ ಅವರನ್ನು ಕಸಾಪದಿಂದ ವಜಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶ್‌ ಜೋಶಿ ವಿರುದ್ಧ ಮೇ 17ರಂದು ಮೈಸೂರು ವಿಭಾಗ ಮಟ್ಟದ ಪ್ರತಿಭಟನಾ ಸಭೆಯನ್ನು ಮಂಡ್ಯದಲ್ಲಿ ಹಮ್ಮಿಕೊಂಡಿದ್ದೇವೆ. ಈ ಸಭೆಯಿಂದಲೇ ಜೋಶಿ ಅವರ ಅವನತಿ ಪ್ರಾರಂಭವಾಗಲಿದೆ. ಜೋಶಿ ಹೊರ ದೇಶದಿಂದ ಸಂಗ್ರಹಿಸಿದ ಹಣಕ್ಕೆ ಲೆಕ್ಕವಿಲ್ಲ. ಅಲ್ಲದೆ ವಿದೇಶಿ ಪ್ರವಾಸಕ್ಕೆ 24 ಕೋಟಿ ರೂ. ಖರ್ಚು ಮಾಡಿದ್ದಾರೆ. ಅದರ ಲೆಕ್ಕ ಕೊಡ ಕೊಡಬೇಕು ಎಂದು ಅವರು ಆಗ್ರಹಿಸಿದರು.

ಸಮ್ಮೇಳನದ ಸಂದರ್ಭದಲ್ಲಿ ಮಹೇಶ್‌ ಜೋಶಿ ಅವರಿಂದ ಹಲವು ಅವ್ಯವಹಾರ ನಡೆದಿದೆ ಎಂದು ಮಂಡ್ಯದ ಕನ್ನಡ ಪರ, ಸಾಹಿತ್ಯ, ಸಂಘ – ಸಂಸ್ಥೆಗಳ ಮುಖಂಡರು ಆರೋಪಿಸಿದ್ದು ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದರು ಎನ್ನಲಾಗಿದೆ. ಈ ಮಾಹಿತಿ ಅರಿತ ಮಹೇಶ್ ಜೋಶಿ ಮಂಡ್ಯ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಕೆ.ಬೋರಯ್ಯ, ಸುನಂದ ಜಯರಾಂ, ಮುದ್ದೇಗೌಡ, ಕೃಷ್ಣಪ್ರಕಾಶ್, ಕಾರಸವಾಡಿ ಮಹದೇವು, ಟಿ.ಎಲ್ಕೃ.ಷ್ಣೆಗೌಡ, ಸಿ.ಕುಮಾರಿ, ಮಂಗಲ ಲಂಕೇಶ್, ಯೋಗಣ್ಣ, ಜಯರಾಂ, ವೆಂಕಟಗಿರಿಯಯ್ಯ ನರಸಿಂಹಮೂರ್ತಿ, ಹುರುಗಲವಾಡಿ ರಾಮಯ್ಯ ಹಾಗೂ ಸುರೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...