ಅಕಾಡಮಿಯ 2022 ಮತ್ತು 2023 ನೇ ಸಾಲಿನ ಬ್ಯಾರಿ ಅಕಾಡಮಿ ಚಮ್ಮನ (ಗೌರವ ಪುರಸ್ಕಾರ)ಕ್ಕೆ ಹತ್ತು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್ ಯು.ಹೆಚ್. ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬ್ಯಾರಿ ಸಾಹಿತ್ಯ ವಿಭಾಗದಲ್ಲಿ ಅಬ್ದುಲ್ ಸಮದ್ ಬಾವಾ, ನಝ್ಮತ್ತುನ್ನೀಸಾ ಲೈಝ್, ಎಂ.ಪಿ.ಬಶೀರ್ ಅಹ್ಮದ್, ಬ್ಯಾರಿ ಭಾಷೆ ವಿಭಾಗದಲ್ಲಿ ಅನ್ಸಾರ್ ಇನೋಳಿ, ಸೈಫ್ ಕುತ್ತಾರ್ ಹಾಗೂ ರಶೀದ್ ನಂದಾವರ, ಮುಹಮ್ಮದ್ ಅಲಿ ಬಡ್ಡೂರು, ಯಾಸೀರ್ ಕಲ್ಲಡ್ಕ, ಮಲ್ಲಿಕಾ ಶೆಟ್ಟಿ ಅವರನ್ನು ಬ್ಯಾರಿ ಕಲೆ, ಸಂಸ್ಕೃತಿ ವಿಭಾಗದಲ್ಲಿ ಮತ್ತು ಬ್ಯಾರಿ ಭಾಷೆ, ಸಂಘಟನೆಯ ವಿಭಾಗದಲ್ಲಿ ಟಿ.ಎಂ.ಶಾಹಿದ್ ತೆಕ್ಕಿಲ್ ಅವರು ಸೇರಿದಂತೆ ಒಟ್ಟು 10 ಮಂದಿಯನ್ನು ‘ಚಮ್ಮನ’ ಗೌರವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ತಿಳಿಸಿದೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬ್ಯಾರಿ ಅಕಾಡಮಿ ಚಮ್ಮನವು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.
ಬ್ಯಾರಿ ಅಕಾಡಮಿ ಚಮ್ಮನ ಕಾರ್ಯಕ್ರಮವು ಡಿ.7ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.





