ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: 98 ಜನರಿಗೆ ಜೀವಾವಧಿ ಶಿಕ್ಷೆ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.

2014ರಲ್ಲಿ ನಡೆದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು (ಅಕ್ಟೋಬರ್ 24) ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಆದೇಶ ನೀಡಿದ್ದಾರೆ.

ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ​ಐದು ವರ್ಷ ಶಿಕ್ಷೆ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

2014 ರ ಆಗಸ್ಟ್ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ​ ಇಂದಿಗೆ (ಅಕ್ಟೋಬರ್ 24) ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್​ ಅಂತಿಮ ತೀರ್ಪು ನೀಡಿದೆ.

ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ದೊಡ್ಡ ಮಟ್ಟದ ಘರ್ಷಣೆಗೆ ಕಾರಣ, ಗ್ರಾಮದಲ್ಲಿದ್ದ ಅಸ್ಪೃಶ್ಯತೆ. ಗ್ರಾಮದಲ್ಲಿ ಸವರ್ಣೀಯರು ನಡೆಸುತ್ತಿದ್ದ ಅಸ್ಪೃಶ್ಯತೆಯನ್ನು ಗ್ರಾಮದ ದಲಿತರು ಖಂಡಿಸಿದ್ದರು. ಇದರಿಂದ ಸವರ್ಣೀಯರು ಮತ್ತು ದಲಿತರ ನಡುವೆ ಆರೋಪ, ಪ್ರತ್ಯಾರೋಪ, ದೂರು ಪ್ರತಿದೂರು ನೀಡುವುದು ನಡದೇ ಇತ್ತು.

ಆದರೆ ಆಗಸ್ಟ್ 28 , 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ದಲಿತ ಸಮುದಾಯದ ಮಂಜುನಾಥ ಮತ್ತು ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಸವರ್ಣೀಯರು ಜಗಳ ಆರಂಭಿಸಿದ್ದರು. ಅಂದು ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...