ನಬಾರ್ಡ್‌ ನೀತಿ ವಿರೋಧಿಸಿ ಇದೇ 29ರಂದು ರಿಸರ್ವ್‌ ಬ್ಯಾಂಕ್‌ ಎದುರು ರೈತರ ಬೃಹತ್‌ ಪ್ರತಿಭಟನೆ

Date:

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್‌ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್‌ ಹಾವಳಿ ತಡೆಯಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜ.29ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಿಸರ್ವ್‌ ಬ್ಯಾಂಕ್‌ ಎದುರು ಬೃಹತ್‌ ಪ್ರತಿಭಟನೆ ನಡೆಸಲಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, “ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ದೃಷ್ಟಿಯಿಂದ ಆರ್ಥಿಕ ನೆರವು ನೀಡಲು ಸ್ಥಾಪನೆಯಾಗಿರುವ ನಬಾರ್ಡ್‌ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದೆ. ದೂರದೃಷ್ಟಿಯಿಂದ ಸಹಕಾರ ಚಳವಳಿ ಕಟ್ಟಿದ ಸಹಕಾರಿ ಸಂಸ್ಥೆಗಳು ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದು ಗ್ರಾಮೀಣ ಪ್ರದೇಶದ ಆರ್ಥಿಕತೆ ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಡಿ ಸಿ ಸಿ ಬ್ಯಾಂಕ್‌ಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ. ಆದರೆ ಕೇಂದ್ರ ಸರ್ಕಾರ ಮೂರು ವರ್ಷಗಳಿಂದ ಪ್ರತಿ ವರ್ಷ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಲೇ ಬರುತ್ತಿದೆ. ಕೇಂದ್ರದ ಈ ನೀತಿಯಿಂದಾಗಿ ನಬಾರ್ಡ್‌ ರೈತರಿಗೆ ನೀಡುತ್ತಿದ್ದ ಸಾಲದ ಮೊತ್ತ ಕಡಿಮೆ ಮಾಡಿ ಈ ಸಾಲಿನಲ್ಲಿ ನಮ್ಮ ರಾಜ್ಯಕ್ಕೆ ನೀಡುತ್ತಿದ್ದ ಸಾಲವನ್ನು 58% ತಗ್ಗಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೊರೇಟ್‌ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸಿದೆ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ಮತ್ತು ಕಿರುಕುಳದಿಂದ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರು ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್‌ ಮೇಲೆ ಯಾರಿಗೂ ಹಿಡಿತ ಇಲ್ಲ. ಮರ್ಯಾದೆಗೆ ಅಂಜಿ ಬಡಜನರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕೆಲವರು ಊರನ್ನೇ ತೊರೆಯುತ್ತಿದ್ದಾರೆ. ಸರ್ಕಾರ ಕೂಡಲೇ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ (ಜ.29) ಬೆಳಿಗ್ಗೆ 11ಗಂಟೆಗೆ ನಡೆಯುವ ಬೃಹತ್‌ ಪ್ರತಿಭಟನೆಯಲ್ಲಿ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು, ಡಿ ಸಿ ಸಿ ಬ್ಯಾಂಕಿನ ಆಡಳಿತ ಮಂಡಳಿಯವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಮತ್ತು ಷೇರುದಾರರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ರೈತ ಸಂಘದ ಪದಾಧಿಕಾರಿಗಳಾದ ಜೆ ಎಂ ವೀರಸಂಗಯ್ಯ, ಎನ್‌ ಡಿ ವಸಂತಕುಮಾರ್‌, ಗೋಪಾಲ ಪಾಪೇಗೌಡ, ಅರುಣಕುಮಾರ್‌ ಕುರುಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...