ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತವಾರ್ತೆ ಘಟಕದ ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕ : ಶಾಂತಿಗಾಗಿ ನಾಗರಿಕರ ವೇದಿಕೆ ಶ್ಲಾಘನೆ

Date:

ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತವಾರ್ತೆ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದೆ. ಇವರೆಲ್ಲರನ್ನೂ ಮತ್ತು ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕರಾದ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕರಾದ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸಿದೆ.

ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಪರವಾಗಿ ತಾರಾರಾವ್‌, ನಗರಗೆರೆ ರಮೇಶ, ವಿ. ಎಸ್.‌ ಶ್ರೀಧರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ. ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ (ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ) ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೊಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...