ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮೀಡಿಯಾ ಕಿಟ್‍; ಅರ್ಹರಿಂದ ಅರ್ಜಿ ಆಹ್ವಾನ

Date:

ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accreditation Card) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‍ಗಳನ್ನು ಪಡೆದಿರುವುದಿಲ್ಲ ಎಂದು ರೂ. 200 ರ ಬಾಂಡ್‍ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: Breaking News | ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು

ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2025ನೇ ಆಗಸ್ಟ್ 22 ರ ಸಂಜೆ 5:00 ಗಂಟೆಯೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ.17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಭಾಗದಲ್ಲಿ “ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ” ಎಂದು ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...