ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳು ಗೊಂದಲ ಸೃಷ್ಟಿಸುವುದು ಬೇಡ: ಸಚಿವ ಮಹದೇವಪ್ಪ

Date:

ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

“ಸರ್ಕಾರವೊಂದು ತಾನು ಜನರಿಗೆ ನೀಡಿದ ಪ್ರಣಾಳಿಕೆಗಳನ್ನು ಸಮರ್ಥವಾಗಿ ಜಾರಿಗೊಳಿಸಿ, ಜನ ಸಾಮಾನ್ಯರ ಬದುಕು ಹಸನಾಗುವ ನಿಟ್ಟಿನಲ್ಲಿ ಆಡಳಿತವನ್ನು ನೀಡುತ್ತಿರುವಾಗ, ಆಡಳಿತಾತ್ಮಕ ಸ್ಥಿರತೆ, ಜನರ ನಂಬಿಕೆಗೆ ವಿರುದ್ಧವಾಗಿ, ಜನರನ್ನು ಗೊಂದಲಗೊಳಿಸುವ ಹಾಗೆ ಪ್ರತಿದಿನ ಕೇಳುತ್ತಿರುವ ಪ್ರಶ್ನೆಗಳು ಆಡಳಿತಾತ್ಮಕ ದೃಷ್ಟಿಯಿಂದ ಅಷ್ಟೊಂದು ಸಮಂಜಸವಾಗಿ ಕಾಣುತ್ತಿಲ್ಲ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

“ಒಂದು ರಾಜಕೀಯ ಪಕ್ಷವು ಕಾಲದ ಅಗತ್ಯಕ್ಕೆ ತಕ್ಕಂತೆ, ಜನರ ಅಭಿಪ್ರಾಯವನ್ನು ಆಧರಿಸಿ, ನಾಯಕರ ಸಾಮರ್ಥ್ಯವನ್ನು ಅರ್ಥೈಸಿ ಪಕ್ಷದ ವ್ಯಾಪ್ತಿಯ ಒಳಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಇದು ಯಾವುದೇ ಬಹಿರಂಗ ಒತ್ತಡದಿಂದ ಅಥವಾ ವ್ಯಕ್ತಿಗತ ಆಸೆಗಳಿಂದ ಜರುಗುವಂತಹ ಪ್ರಕ್ರಿಯೆ ಅಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಯಕತ್ವ ಬದಲಾವಣೆಯ ನಿರ್ಧಾರ ಏನಾದರೂ ಇದ್ದರೆ ಅದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಧ್ಯಮದ ಮುಂದೆಯೇ ಬಂದು ತಿಳಿಸುತ್ತದೆ. ಹೀಗಾಗಿ ಹೋದಲ್ಲಿ ಬಂದಲ್ಲಿ ರಚ್ಚೆ ಹಿಡಿದವರಂತೆ ನಾಯಕತ್ವ ಬದಲಾವಣೆಯ ಪ್ರಶ್ನೆಯನ್ನು ಕೇಳುವ ಬದಲು, ಜನರ ನಂಬಿಕೆಯನ್ನು ಹೆಚ್ಚಿಸುವಂತಹ ಮತ್ತು ಜನರ ಬದುಕಿಗೆ ಪ್ರಯೋಜನ ಆಗುವಂತಹ ಮತ್ತು ಆಡಳಿತಾತ್ಮಕವಾಗಿ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕೆಂದು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಮಿತ್ರರನ್ನು ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಸಾರ್ವಜನಿಕ ಜೀವನದಲ್ಲಿ ಜನರ ಸುಭದ್ರ ಬದುಕಿಗೇ ಮೊದಲ ಪ್ರಾಶಸ್ತ್ಯ ಇದ್ದು, ಇದಕ್ಕೆ ಪೂರಕವಾಗಿಯೇ ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿರುವಾಗ, ಸುಮ್ಮನೇ ಸೃಷ್ಟಿಸುವ ಒತ್ತಡಗಳು ಜನರಲ್ಲಿ ಗೊಂದಲ ಮೂಡಿಸದಿರಲಿ ಎಂದು ಈ ವೇಳೆ ಆಶಿಸುವೆನು!” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...