ಯುಪಿಐ ತೊರೆದು ನಗದು ವ್ಯವಹಾರ ಆರಂಭಿಸಿದ ವರ್ತಕರಿಗೆ ಎಚ್ಚರಿಕೆ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

Date:

ಒಟ್ಟು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ ಎಂಬ ವರದಿಗಳ ನಡುವೆ ಜಿಎಸ್‌ಟಿ ವಿಧಿಸುವ ಆತಂಕಕ್ಕೆ ಒಳಗಾದ ವರ್ತಕರು ಯುಪಿಐನಂತಹ ಡಿಜಿಟಲ್ ಪಾವತಿಯನ್ನು ನಿಲ್ಲಿಸಿ ನಗದು ವಹಿವಾಟು ನಡೆಸುತ್ತಿದ್ದಾರೆ. ಈ ರೀತಿ ಮಾಡುವ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ.

ನಗದು ವಹಿವಾಟು ಸೇರಿದಂತೆ ಯಾವುದೇ ಮಾದರಿಯ ವಹಿವಾಟಿಗೂ ಜಿಎಸ್‌ಟಿ ವಿಧಿಸಲಾಗುತ್ತದೆ. ಯುಪಿಐನಂತಹ ಡಿಜಿಟಲ್ ಪಾವತಿ ನಿಲ್ಲಿಸಿ ನಗದು ವಹಿವಾಟು ನಡೆಸುತ್ತಿರುವ ವರ್ತಕರ ಮೇಲೂ ಇಲಾಖೆ ಕಣ್ಣಿಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? 2,000 ರೂ.ಗೆ ಮೇಲ್ಪಟ್ಟ ಯುಪಿಐ ವಹಿವಾಟು ಮೇಲೆ ಜಿಎಸ್‌ಟಿ? ಕೇಂದ್ರ ಸರ್ಕಾರ ಸ್ಪಷ್ಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಎಸ್‌ಟಿ ಕಾಯ್ದೆ-2017ರ ಪ್ರಕರಣ 22ರ ನಿಯಮಗಳನ್ನು ಇಲಾಖೆಯು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಕಾಯ್ದೆ ಪ್ರಕಾರ ಸರಕುಗಳ ಪೂರೈಕೆದಾರರ ಒಟ್ಟು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ಮತ್ತು ಸೇವೆಗಳ ಪೂರೈಕೆದಾರರ ವಾರ್ಷಿಕ ವಹಿವಾಟು 20 ಲಕ್ಷ ರೂಪಾಯಿ ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯವಾಗಿದೆ.

ಈ ವಹಿವಾಟಿನಲ್ಲಿ ನಗದು, ಯುಪಿಐ, ಪಿಓಎಸ್‌ ಮೆಷಿನ್‌, ಬ್ಯಾಂಕ್‌ ಖಾತೆ ಸೇರಿದಂತೆ ಎಲ್ಲ ವಿಧಾನದ ವಹಿವಾಟು ಕೂಡ ಸೇರುತ್ತದೆ ಎಂದು ಇಲಾಖೆಯ ಹೆಚ್ಚುವರಿ ಆಯುಕ್ತರು ಹೇಳಿದ್ದಾರೆ.

ಇನ್ನು ವಾರ್ಷಿಕವಾಗಿ 1.5 ಕೋಟಿ ರೂಪಾಯಿಗಿಂತ ಕಡಿಮೆ ವಹಿವಾಟು ಇರುವ ವ್ಯಾಪಾರಿಗಳು ಜಿಎಸ್‌ಟಿ ಅಡಿ ನೋಂದಣಿ ಪಡೆದು ರಾಜಿ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಳ್ಳಬಹುದು. ಇದರಡಿ ಶೇ 0.5ರಷ್ಟು ಎಸ್‌ಜಿಎಸ್‌ಟಿ ಮತ್ತು ಶೇ 0.5ರಷ್ಟು ಸಿಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಆದರೆ ನೋಂದಣಿ ಪಡೆಯದೆ ವಹಿವಾಟು ನಡೆಸಿದರೆ ರಾಜಿ ತೆರಿಗೆ ಪದ್ಧತಿ ಅನ್ವಯಿಸಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...