ಮೆಟ್ರೋ ಯೋಜನೆಗೆ ಕೇಂದ್ರದಿಂದ ಬೆಂಗಳೂರಿಗೆ 10%, ಅಹಮದಾಬಾದ್‌ಗೆ 20% ಅನುದಾನ : ಡಿ ಕೆ ಸುರೇಶ್

Date:

ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣ ಬಳಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಮೆಟ್ರೋ ದರ ಏರಿಕೆ ಬಗ್ಗೆ ಅವರು ಮಾತನಾಡುವುದೇನೆ ಇದ್ದರೂ ಅದು ಪ್ರಧಾನಮಂತ್ರಿಗಳ ಮುಂದೆ ಮಾತನಾಡಲಿ. ಮೆಟ್ರೋ ನಮ್ಮ ಯೋಜನೆ ಎಂದು ಪ್ರಚಾರ ಪಡೆಯುತ್ತಿರುವವರು ಯಾರು? ತೇಜಸ್ವಿ ಸೂರ್ಯ ಅವರು ಮೆಟ್ರೋ ನಮ್ಮ ಕೊಡುಗೆ ರಾಜ್ಯ ಸರಕಾರದ್ದಲ್ಲ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಮೆಟ್ರೋ ಕೇಂದ್ರ ಸರಕಾರದ ಸಮಿತಿ ಕೈಯಲ್ಲಿದೆ. ಆ ಸಮಿತಿ ತೀರ್ಮಾನದಂತೆ ಮೆಟ್ರೋ ದರ ಏರಿಕೆ ಮಾಡಲಾಗುತ್ತದೆ. ದರ ಏರಿಕೆ ಆಗಬಾರದು ಎಂಬುದೂ ನಮ್ಮ ಇಚ್ಛೆ. ತೇಜಸ್ವಿ ಸೂರ್ಯ ಅವರ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು, ಅವರು ತೀರ್ಮಾನ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಿ” ಎಂದು ಸುರೇಶ್ ಅವರು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ಖಾಲಿ ಟ್ರಂಕ್ ಹಿಡಿದಿರುವುದು, ಕರ್ನಾಟಕದ 4.5- 5 ಲಕ್ಷ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿಕೊಂಡು ಹೋಗುತ್ತಿರುವುದನ್ನು ತೋರಿಸಲು. ಕೇಂದ್ರ ಸರಕಾರ ಕಳೆದ 12 ವರ್ಷಗಳಿಂದ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಪಟ್ಟಿ ಹೇಳಲಿ. ಬೆಂಗಳೂರಿಗೆ ಅವರ ಕೊಡುಗೆ ಖಾಲಿ ಡಬ್ಬ ಎಂದು ತೇಜಸ್ವಿ ಸೂರ್ಯ ತೋರಿಸುತ್ತಿರುವುದನ್ನು ಮಾಧ್ಯಮಗಳು ಚೆನ್ನಾಗಿ ತೋರಿಸಿ” ಎಂದು ಕಿಡಿಕಾರಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ|ಮೋದಿ ರಾಜಿ ರಾಜಕಾರಣದಿಂದ ಭಾರತದ ಸ್ವಾಭಿಮಾನ- ಸಾರ್ವಭೌಮತೆಗೆ ಧಕ್ಕೆ

ಮೆಟ್ರೋ ಯೋಜನೆಗಳಿಗೆ ರಾಜ್ಯ ಸರಕಾರ ಹಣ ನೀಡದಿರುವುದಕ್ಕೆ ದರ ಏರಿಕೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೆಟ್ರೋ ಯೋಜನೆಗಳಿಗೆ 10% ಹಣ ನೀಡುತ್ತದೆ. ರಾಜ್ಯ ಸರ್ಕಾರ 10% ಹಣದ ಜೊತೆಗೆ ಯೋಜನೆ ಜಾರಿಗೆ ಅಗತ್ಯವಿರುವ ಭೂಸ್ವಾಧೀನ ಪರಿಹಾರ ಮೊತ್ತವನ್ನು ಭರಿಸಬೇಕು. ಇದರಿಂದ ರಾಜ್ಯ ಸರ್ಕಾರದ ಪಾಲು ಸುಮಾರು 17%ರಷ್ಟು ಇರುತ್ತದೆ. ಉಳಿದ ಹಣವನ್ನು ಸಾಲದ ರೂಪದಲ್ಲಿ ಪಡೆಯಲಾಗುವುದು. ಅದರ ಹೊರೆ ಪ್ರಯಾಣಿಕರ ಮೇಲೆ ಬೀಳುತ್ತದೆ. ಸಮಯ ಸಿಕ್ಕಾಗ ಮೆಟ್ರೋ ನಮ್ಮದು ಎಂದು ಶೋ ಕೊಟ್ಟು, ಈಗ ಖಾಲಿ ಡಬ್ಬ ತೋರುತ್ತಿದ್ದಾರೆ” ಎಂದು ಹರಿಹಾಯ್ದರು.

“ಬೆಂಗಳೂರಿನಲ್ಲಿ ವಾಹನ ದಟ್ಟಣೆಗೆ ಕಾರಣವಾಗಿರುವುದು ಕೇಂದ್ರ ಸರ್ಕಾರ. ನಮ್ಮ ಐಟಿ ಬಿಟಿ ತೆರಿಗೆ ಹಾಗೂ ಬೆಂಗಳೂರಿನ ಜಿಎಸ್ ಟಿ ಸೇರಿ ವಾರ್ಷಿಕವಾಗಿ 5 ಲಕ್ಷ ಕೋಟಿ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಅದರಲ್ಲಿ ನಮಗೆ ವಾಪಸ್ ನೀಡುತ್ತಿರುವುದು ಕೇವಲ 10% ಅಂದರೆ 50 ಸಾವಿರ ಕೋಟಿ ಮಾತ್ರ. ಉಳಿದ ಹಣ ಗುಜರಾತ್, ಅಹಮದಾಬಾದ್, ಉತ್ತರ ಪ್ರದೇಶ, ಬಿಹಾರಕ್ಕೆ ಹೋಗುತ್ತಿದೆ. ತೇಜಸ್ವಿ ಸೂರ್ಯ ಅವರು ಪ್ರಧಾನಿ ಮುಂದೆ ಭಾಷಣ ಮಾಡಿ ತಮ್ಮ ಎದೆಗಾರಿಕೆ ತೋರಿ ರಾಜ್ಯಕ್ಕೆ ಹಣ ತರಲಿ. ಕೇಂದ್ರ ಸರ್ಕಾರ ಅಹಮದಾಬಾದ್ ಮೆಟ್ರೋಗೆ 20% ಅನುದಾನ ನೀಡುತ್ತಿದೆ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯ. ಕರ್ನಾಟಕಕ್ಕೂ 20% ಅನುದಾನ ಕೊಟ್ಟರೆ ಸಾರ್ವಜನಿಕರ ಮೇಲೆ ಹೊರೆ ಕಡಿಮೆ ಆಗುತ್ತದೆ ಅಲ್ಲವೇ? ಈ ಬಗ್ಗೆ ಮಾಧ್ಯಮಗಳು ಸಾರ್ವಜನಿಕರನ್ನು ಜಾಗೃತಿಗೊಳಿಸಬೇಕು” ಎಂದು ಸವಾಲೆಸೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...