ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯು ಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ.

ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ. ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ಅನಧಿಕೃತವಾಗಿ, ನಿಯಮ ಮೀರಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು, ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಕೂಡಲೇ ಅರಣ್ಯ ಸ್ವರೂಪದ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಈಶ್ವರ ಖಂಡ್ರೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...