ಅನಧಿಕೃತ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ ತೆರವಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

Date:

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ.

ಈ ಕುರಿತು ಕ್ರಮ ಕೈಗೊಳ್ಳಲು ಇಲಾಖೆಯ ಕಾರ್ಯದರ್ಶಿಗೆ ಟಿಪ್ಪಣಿ ಬರೆದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, “ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿವೆ” ಎಂದಿದ್ದಾರೆ.

“ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು” ಎಂದು ಸಚಿವರು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಈಶ್ವರ್‌ ಖಂಡ್ರೆ 1

“ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಹೇಳಿದ್ದಾರೆ.

“ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ” ಎಂದು ಸಚಿವರು ಉಲ್ಲೇಖ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...