ಓಟ್‌ ಬ್ಯಾಂಕ್‌ಗಾಗಿ ಹುಬ್ಬಳ್ಳಿ ಗಲಾಟೆ ಪ್ರಕರಣ ಕೈ ಬಿಡಲು ಸಚಿವರಿಂದ ಪ್ರಯತ್ನ: ಯತ್ನಾಳ ಕಿಡಿ

Date:

  • ದಾಳಿಕೋರರಿಗೆ ‘ಶ್ರೀ ರಕ್ಷೆ’ ನೀಡುತ್ತಿರುವ ಸರ್ಕಾರ
  • ಸರ್ಕಾರ ಗಲಭೆಕೋರರ ಪರ ಇದೆ ಎಂದು ಸಾಬೀತು

ಹಳೆ ಹುಬ್ಬಳ್ಳಿ, ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗಳಲ್ಲಿ ದಾಳಿ ಮಾಡಿದ ದಾಳಿಕೋರರ ವಿರುದ್ಧ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿರುವುದು ಇವರ ತುಷ್ಟೀಕರಣ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಬಸವರಾಜ ಪಾಟೀಲ ಯತ್ನಾಳ ಟೀಕಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಬ್ರದರ್ಸ್ ವಿರುದ್ದ ಪ್ರಕರಣಗಳನ್ನು ಹಿಂಪಡೆಯಲು ಪತ್ರ ಬರೆದಿರುವ ಡಿ ಕೆ ಶಿವಕುಮಾರ್ ರಾಜ್ಯದ ಶಾಂತಿ ಕದಡುವ ಪುಂಡ ಪೋಕರಿಗಳಿಗೆ ನೇರ ಬೆಂಬಲ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ‘ಪ್ರಭಾವಿ’ ಸಚಿವರೊಬ್ಬರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 1000 ಜನ ಸೇರಿ ಪೊಲೀಸ್ ಠಾಣೆಗೆ ಕಲ್ಲೆಸೆದಿದ್ದು ಮನ್ನಿಸಲಾಗದ ಅಪರಾಧ ಎಂದು ಈಗಾಗಲೇ ನ್ಯಾಯಾಲಯ ತೀರ್ಪು ನೀಡಿದೆ. ಇವರ ಜಾಮೀನು ಅರ್ಜಿಯನ್ನು ಘನತೆವೆತ್ತ ಕರ್ನಾಟಕ ಉಚ್ಚ ನ್ಯಾಯಾಲಯವೂ ಸಹ ತಿರಸ್ಕರಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುರ್ನಾಸು ಬಿಜೆಪಿ ಬಿಟ್ಟು ಒಂದಾಗುವರೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ? 

“ಶಾಂತಿ ಸೌಹಾರ್ದತೆ ಹಾಳು ಮಾಡುವ ನಿಟ್ಟಿನಲ್ಲಿ ಅಂದು ಪೊಲೀಸ್ ಠಾಣೆಗೆ ಕಲ್ಲೆಸೆದವರ ಮುಖಗಳನ್ನು ಸಿ.ಸಿ. ಕ್ಯಾಮೆರಾದಿಂದ ಪಡೆಯಬಹುದು ಹಾಗೂ ಅವರ ಚಹರೆಯನ್ನು ಅದರಿಂದ ಖಾತರಿ ಪಡೆಸಬಹುದು ಎಂದು ದ್ವಿಸದಸ್ಯ ಪೀಠ ಹೇಳಿತ್ತು. ಮುಂದುವರೆದು, ಅಲ್ಲಿ ನೆರೆದಿದ್ದ ಉದ್ರಿಕ್ತರ ಗುಂಪನ್ನು ಅವರ ಮೊಬೈಲ್ ರೆಕಾರ್ಡ್ಸ್ (ಟವರ್ ಲೊಕೇಶನ್) ಮೂಲಕ ಸಹ ಖಾತರಿಗೊಳಿಸಬಹುದು. ಹಾಗಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಹಾಳುಗೆಡವಿದ ಉದ್ರಿಕ್ತರಿಗೆ ಜಾಮೀನು ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿರಸ್ಕರಿಸಿ, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತು ಹಿಡಿದಿತ್ತು” ಎಂದಿದ್ದಾರೆ.

“ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹುಬ್ಬಳ್ಳಿ ಗಲಾಟೆ ಪ್ರಕರಣವನ್ನು ಕೈ ಬಿಡಲು ಸರ್ಕಾರದ ಸಚಿವರೊಬ್ಬರು ಪ್ರಯತ್ನಿಸುತ್ತಿರುವುದು ಅಧಿಕಾರದ ದುರ್ಬಳಕೆ ಹಾಗೂ ಅಪರಾಧಗಳನ್ನು legitimize ಮಾಡುವ ಪ್ರಯತ್ನ ಎಂದರೆ ತಪ್ಪಾಗುವುದಿಲ್ಲ. ಸಾರ್ವಜನಿಕ ಆಸ್ತಿ ಪಾಸ್ತಿಯನ್ನು ಹಾಳು ಮಾಡಿದ ಪಟ್ಟಭದ್ರ ಹಿತಾಸಕ್ತಿಗಳನ್ನು ಜೈಲಿಗಟ್ಟಿ, ಸರ್ಕಾರಕ್ಕಾದ ನಷ್ಟವನ್ನು ಅವರಿಂದ ಭರಿಸುವ ಕ್ರಮ ಜರುಗಿಸುವುದನ್ನು ಬಿಟ್ಟು, ಅವರಿಗೆ ‘ಶ್ರೀ ರಕ್ಷೆ’ ನೀಡುತ್ತಿರುವುದು ಸರ್ಕಾರ ಗಲಭೆಕೋರರ ಪರ ಇದೆ ಎಂದು ಸಾಬೀತಾಗುತ್ತದೆ” ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...