ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಸಲು ಸಚಿವಾಲಯದಿಂದ ಉತ್ತೇಜನ: ಹೆಚ್‌ ಡಿ ಕುಮಾರಸ್ವಾಮಿ

Date:

ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಮಂಗಳವಾರ ತಮ್ಮ ಉಸ್ತುವಾರಿಯ ಎರಡೂ ಸಚಿವಾಲಯಗಳ ಉನ್ನತ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಪರಿಶೀಲನಾ ಸಭೆಗಳನ್ನು ನಡೆಸಿದರು.

ಎರಡೂ ಸಚಿವಾಲಯಗಳಲ್ಲಿ ನಡೆಯುತ್ತಿರುವ ಅಭಿವೃಧ್ಧಿ ಕಾರ್ಯಕ್ರಮಗಳು ಹಾಗೂ ಈಗಾಗಲೇ ಅನುಷ್ಠಾನಕ್ಕೆ ತರಲಾಗಿರುವ ಮಹತ್ವದ ಕಾರ್ಯಕ್ರಮಗಳ ಬಗ್ಗೆ ಸಚಿವರು ಕೂಲಂಕಶವಾಗಿ ಚರ್ಚೆ ನಡೆಸಿದರು.

ಬೃಹತ್‌ ಕೈಗಾರಿಕೆ ಸಚಿವಾಲಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೃಹತ್‌ ಕೈಗಾರಿಕೆ ಸಚಿವಾಲಯದ ಸಭೆಯಲ್ಲಿ ಕೇಂದ್ರ ಸಚಿವರು ಎಲೆಕ್ಟ್ರಿಕ್‌ ವಾಹನಗಳ ಬಳಕೆ ಕುರಿತಾದ ಪಿಎಂ ಇ ಡ್ರೈವ್‌ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯ (PLI) ಕಾರ್ಯಕ್ರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲ ನಿರ್ದಿಷ್ಟ ಸೂಚನೆಗಳನ್ನು ನೀಡಿದರು.

ರಸ್ತೆ ಸಾರಿಗೆ ಕ್ಷೇತ್ರದಲ್ಲಿ ವಾಯು ಮಾಲಿನ್ಯವನ್ನು ಗಣನೀಯ ಪ್ರಮಾಣದಲ್ಲಿ ಕುಗ್ಗಿಸಬೇಕಾಗಿದ್ದು, ಆ ದಿಸೆಯಲ್ಲಿ ಪ್ರಧಾನಿಗಳು ನಿಗದಿ ಮಾಡಿರುವ ಗುರಿಗಳನ್ನು ಮುಟ್ಟುವ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು. ಹೆಚ್ಚೆಚ್ಚು ಪ್ರಮಾಣದಲ್ಲಿ ಎಲೆಕ್ಟ್ರಿಕ್‌ ವಾಹಗಳ ಬಳಕೆಯನ್ನು ಉತ್ತೇಜಿಸುವುದು, ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಇನ್ನಿತರೆ ಮೂಲಸೌಕರ್ಯ ಅಭಿವೃದ್ಧಿ ಕುರಿತೂ ಅಧಿಕಾರಗಳು ಸಚಿವರಿಗೆ ಮಾಹಿತಿ ನೀಡಿದರು.

ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳ ಅಡಿಯಲ್ಲಿ ದೇಶಿಯವಾಗಿ ಎಲೆಕ್ಟ್ರಿಕ್‌ ವಾಹನಗಳನ್ನು ಅಗತ್ಯ ಪ್ರಮಾಣದಲ್ಲಿ ತಯಾರಿಸುವುದಕ್ಕೆ ಸಚಿವಾಲಯ ಹೆಚ್ಚು ಉತ್ತೇಜನ ನೀಡಬೇಕು ಎಂದು ಸಚಿವರು ಒತ್ತಿ ಹೇಳಿದರು.

ಉಕ್ಕು ಸಚಿವಾಲಯ

ಉಕ್ಕು ಸಚಿವಾಲಯದ ಸಭೆಯಲ್ಲಿ ವಿಶೇಷವಾಗಿ ಸಾರ್ವಜನಿಕ ವಲಯದ ಸ್ಥಾವರಗಳ ಕಾರ್ಯನಿರ್ವಹಣೆ ಬಗ್ಗೆ ಸಚಿವರು ಹೆಚ್ಚು ಮಾಹಿತಿ ಪಡೆದುಕೊಂಡರು.

ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಉಕ್ಕು ಉತ್ಪಾದಕ ಕಂಪನಿಗಳ ಪ್ರಗತಿ ಹಾಗೂ ಉತ್ಪಾದಕತೆಯ ಕ್ಷಮತೆ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ, ಉಕ್ಕು SAIL ವಿಸ್ತರಣೆ ಹಾಗೂ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (ವೈಜಾಗ್ ಸ್ಟೀಲ್) ಕಾರ್ಯಕ್ಷಮತೆ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.

₹11,400 ಕೋಟಿ ಪರಿಹಾರ ಪ್ಯಾಕೇಜ್ ನೀಡಿದ ನಂತರ ಕಾರ್ಖಾನೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ಬಗ್ಗೆ ಸಚಿವರು ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಅಲ್ಲದೆ; ಉಕ್ಕು ಕ್ಷೇತ್ರದಲ್ಲಿ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಲೇಬೇಕೆಂಬ ಪ್ರಧಾನಿಗಳ ಸಂಕಲ್ಪವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ಕೊಡಬೇಕು. ಮತ್ತೂ ಗ್ರೀನ್‌ ಸ್ಟೀಲ್‌ ತಯಾರಿಕೆಗೆ ಹೆಚ್ಚಿನ ಮಾರ್ಗೋಪಾಯಗಳನ್ನು ಕಂಡುಕೊಂಡು ಸಹಯೋಗಗಳನ್ನು ಬಲಪಡಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಬೃಹತ್‌ ಕೈಗಾರಿಕೆ ಸಚಿವಾಲಯದ‌ ಸಭೆಯಲ್ಲಿ ಕಾರ್ಯದರ್ಶಿ ಕಮರನ್‌ ರಿಜ್ವಿ, ಜಂಟಿ ಕಾರ್ಯದರ್ಶಿ ಸುನೀಲ್‌ ಮಿತ್ತಲ್ ಹಾಗೂ ಉಕ್ಕು ಸಚಿವಾಲಯದ ಸಭೆಯಲ್ಲಿ ಹಣಕಾಸು ಸಲಹೆಗಾರರೂ ಆಗಿರುವ ಹೆಚ್ಚುವರಿ ಕಾರ್ಯದರ್ಶಿ ಅಶಿಶ್‌ ಚಟರ್ಜಿ, ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸಭೆಯಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...