ಶಾಸಕರ ಸಭೆ | ಸಿಎಂ ತಮ್ಮ ಅಧಿಕಾರ ಬಳಸಿ ಮಾಡುತ್ತಿದ್ದಾರೆ, ನನ್ನ ಆಕ್ಷೇಪವಿಲ್ಲ: ಡಿ ಕೆ ಶಿವಕುಮಾರ್

Date:

ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ” ಎಂದು ಮರುಪ್ರಶ್ನಿಸಿದರು.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ತನ್ನ ಮನೆ ಸರಿಪಡಿಸಿಕೊಳ್ಳಲಿ

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ” ಎಂದು ಹೇಳಿದರು.

ಬೆಂಗಳೂರು ಹಾಗೂ ನಾಗರಿಕರ ಹಿತಕ್ಕಾಗಿ ಪಾಲಿಕೆ ವಿಭಜನೆ

“ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಈ ವಿಚಾರವಾಗಿ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವನ್ನು ಪಡೆದಿದ್ದೇವೆ. ಪಾಲಿಕೆ ಚುನಾವಣೆ ಕುರಿತಾಗಿ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ. ಬೆಂಗಳೂರು ಹಾಗೂ ನಾಗರಿಕರ ಹಿತಕ್ಕಾಗಿ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ನಾವು ಭೌಗೋಳಿಕ ಹಾಗೂ ಆಡಳಿತ, ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿನ ವಿಸ್ತರಣೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಿದ್ದೇವೆ. ಬಿಜೆಪಿಯವರು ರಾಜಕೀಯ ಕಾರಣಗಳಿಗೆ ನಮ್ಮನ್ನು ಟೀಕೆ ಮಾಡುತ್ತಾರೆ, ಮಾಡಲಿ. ಸಾರ್ವಜನಿಕವಾಗಿ ಟೀಕೆ ಮಾಡುತ್ತಾರೆ, ಮಾಡಲಿ. ನಾವು ಇಡೀ ಬೆಂಗಳೂರು ಹಾಗೂ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾವನೆ ಹೇಳಿರುವುದರಲ್ಲಿ ತಪ್ಪೇನಿದೆ?

ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ. ಹಿರಿಯ ನಾಯಕರು ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಯಾವ ತರಹದ್ದು ತಪ್ಪಿಲ್ಲ” ಎಂದರು.

ರಾಜ್ಯ ರಾಜಕಾರಣಕ್ಕೆ ಖರ್ಗೆ ಅವರು ಮರಳಿ ಬರುತ್ತಾರೆ ಎನ್ನುವ ಕೆಲವರ ಚರ್ಚೆ ಬಗ್ಗೆ ಕೇಳಿದಾಗ, “ಈ ಬಗ್ಗೆಯೂ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ಅವರು ತಿಳಿಸುತ್ತಾರೆ” ಎಂದರು.

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ

ಬಿಜೆಪಿಯವರು ಯೂರಿಯ ಕೊರತೆ ಬಗ್ಗೆ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಅವರ ಮೇಲೆ ಅವರೇ ಪ್ರತಿಭಟನೆ ಮಾಡಿಕೊಳ್ಳಬೇಕು ಅಷ್ಟೇ. ಈ ಹಿಂದೆ ಗೊಬ್ಬರ ಕೊಡಲು ಆಗದೇ ರೈತರ ಮೇಲೆ ಗುಂಡು ಹಾರಿಸಿದ್ದರು. ನಾವು ಅಂತಹ ಕೆಲಸ ಮಾಡುವುದಿಲ್ಲ. ಮಳೆ ಹೆಚ್ಚಾಗಿರುವ ಕಾರಣ ಕೃಷಿ ಚಟುವಟಿಕೆ ಜಾಸ್ತಿಯಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಸಂಸದರು ಒಪ್ಪಿಕೊಂಡಿದ್ದಾರೆ. ಕೂಡಲೇ ಗೊಬ್ಬರ ಸಿಕ್ಕರೆ ನಮ್ಮ ರೈತರಿಗೆ ಒಳ್ಳೆಯದಾಗುತ್ತದೆ ಎಂದು ನಾವು ಒತ್ತಡ ಹಾಕುತ್ತಿದ್ದೇವೆ” ಎಂದು ಹೇಳಿದರು.

“ಬಿಜೆಪಿಗರು ಅವರ ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ” ಎಂದರು.

“ನಾವು ಹಂಚುವುದರಲ್ಲಿ ತಾರತಮ್ಯ ಮಾಡಿದರೆ ಮಾತನಾಡಲಿ. ನಮ್ಮ ಬಳಿ ಎಲ್ಲ ಲೆಕ್ಕವೂ ಇದೆ. ಯಾವ ಯಾವ ಸೊಸೈಟಿಗಳಿಗೆ ಎಷ್ಟು ಹಂಚಲಾಗಿದೆ, ಯಾವ ಜಿಲ್ಲೆಯಲ್ಲಿ ಎಷ್ಟು ದಾಸ್ತಾನಿದೆ ಎನ್ನುವ ಎಲ್ಲ ಲೆಕ್ಕವೂ ಇದೆ. ಇದನ್ನು ಪರಿಶೀಲನೆ ನಡೆಸಲಿ, ಅದನ್ನು ಎಲ್ಲರೂ ನೋಡಲಿ. ನಾವುಗಳು ಯಾರೂ ರೈತರ ವಿರುದ್ಧ ಹೋಗಿಲ್ಲ, ಆ ಕೆಲಸ ಮಾಡುವುದೂ ಇಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...