ಮುಡಾ ಹಗರಣ | ಸಿಎಂಗೆ ದೊಡ್ಡ ಹಿನ್ನಡೆ: ಇ.ಡಿ ನೋಟಿಸ್‌ ಸಮರ್ಥಿಸಿಕೊಂಡ ವಿಜಯೇಂದ್ರ, ಸಿ ಟಿ ರವಿ

Date:

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಬೇಗನೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿಹಾಕುವ ಪ್ರಯತ್ನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ. ಲೋಕಾಯುಕ್ತ ಸಂಸ್ಥೆಯ ತನಿಖೆಯನ್ನು ಮಾಧ್ಯಮಗಳೇ ತೋರಿಸಿವೆ. ರಾತ್ರಿ 8- 9 ಗಂಟೆಗೆ ಸಿದ್ದರಾಮಯ್ಯನವರ ಬಾಮೈದ ನೋಟಿಸ್ ಕೊಡದೆ ಇದ್ದರೂ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು” ಎಂದು ಆಕ್ಷೇಪಿಸಿದರು.

“ಸಿಎಂ ಕುಟುಂಬಕ್ಕೆ ಎಷ್ಟು ಮುಕ್ತ ವ್ಯವಸ್ಥೆ ಇತ್ತೆಂದು ಅವತ್ತು ಕೂಡ ಬಹಿರಂಗವಾಗಿದೆ. ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಪಾದಯಾತ್ರೆ ಮಾಡಿದ್ದವು. ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳ ಧರ್ಮಪತ್ನಿಯವರು 14 ನಿವೇಶನ ಹಿಂತಿರುಗಿಸುತ್ತೇವೆ ಎಂದು ರಾತ್ರೋರಾತ್ರಿ ಮೂಡಕ್ಕೆ ಪತ್ರ ಬರೆದಿದ್ದರು. ಆ ಪತ್ರದ ಮೂಲಕ ಮೂಲಕ ಹಗರಣದಿಂದ ಹೊರಕ್ಕೆ ಬಂದ ಭ್ರಮೆಯಲ್ಲಿ ಮುಖ್ಯಮಂತ್ರಿಗಳೂ ಇದ್ದರು. ಇವತ್ತಿನ ಇ.ಡಿ. ನೋಟಿಸ್, ಇದರಿಂದ ಆಘಾತ ಆಗಿರುವುದರಲ್ಲಿ ಎರಡು ಮಾತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇ.ಡಿಗೆ ಅವರದೇ ಆದ ನಿಯಮಗಳಿರುತ್ತವೆ. ಅದರ ಪ್ರಕಾರ ಅವರು ಮುಂದುವರೆಯುತ್ತಾರೆ. ಇ.ಡಿ. ನೋಟಿಸ್ ರಾಜಕೀಯಪ್ರೇರಿತ ಎಂಬುದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾವಿರಾರು ಕೋಟಿ ಬಡವರ ಪಾಲಾಗಬೇಕಾದ ನಿವೇಶನಗಳ ಅಕ್ರಮ ಹಂಚಿಕೆ ನಡೆದಿತ್ತು. ಈ ದೊಡ್ಡ ಹಗರಣದ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿ ಟಿ ರವಿ ಹೇಳಿದ್ದೇನು?

ಮುಖ್ಯಮಂತ್ರಿಯವರ ಪತ್ನಿ ಆಗದೇ ಇದ್ದಿದ್ದರೆ 30 ವರ್ಷಗಳಷ್ಟು ಹಿಂದೆ ಅಭಿವೃದ್ಧಿ ಹೊಂದಿದ ವಿಜಯನಗರ ಬಡಾವಣೆಯಲ್ಲಿ ನಿವೇಶನ ಸಿಗುತ್ತಿತ್ತಾ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

“ಮುಡಾದಲ್ಲಿ ಅಕ್ರಮ ನಡೆದಿರುವುದು ನಿಜವೆಂದು ಕಾಂಗ್ರೆಸ್ ಪಕ್ಷ ಸೇರಿ ಬಹುತೇಕ ಎಲ್ಲ ಪಕ್ಷಗಳೂ ಒಪ್ಪಿಕೊಂಡಿವೆ. ಯಾರು ಮಾಡಿದ್ದಾರೆ, ಯಾರ ಕಾಲಘಟ್ಟದಲ್ಲಿ ಆಗಿದೆ? ಯಾರು ಲಾಭ ಪಡೆದಿದ್ದಾರೆ ಎಂಬುದು ತನಿಖೆಯಿಂದ ಸಾಬೀತಾಗಬೇಕಿದೆ. ಪ್ರಾಸ್ಪೆಕ್ಟಿವ್ ಮತ್ತು ರೆಟ್ರೋಸ್ಪೆಕ್ಟಿವ್ ನಡುವೆ ಹಿಂದೆ ವಶಪಡಿಸಿಕೊಂಡ ಜಮೀನಿಗೂ ಶೇ 50 ನಿವೇಶನ ಕೊಡುವಂತೆ ಎಲ್ಲೂ ಆದೇಶ ಆಗಿರಲಿಲ್ಲ. ಆದರೆ, ನಿವೇಶನ ಕೊಟ್ಟಿದ್ದು ಅಕ್ರಮವಲ್ಲವೇ? ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಹೇಗಿಲ್ಲವೋ ಮುಡಾದ ಹಗರಣಕ್ಕೂ ಕನ್ನಡಿ ಹಿಡಿಯಬೇಕಾದ ಅವಶ್ಯಕತೆ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...