ದ್ವಿಭಾಷಾ ಸೂತ್ರವೇ ನನ್ನ ಅಭಿಪ್ರಾಯ; ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Date:

“ದ್ವಿಭಾಷಾ ಸೂತ್ರವೇ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ಸರ್ಕಾರದ ಅಭಿಪ್ರಾಯ ಆಗುವಂತೆ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ ಕುವೆಂಪು ವಿಚಾರ ಕ್ರಾಂತಿ ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಢ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಆದರೆ ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ. ಎಲ್ಲ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕುಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ. ಈ ಕತೆಯನ್ನು ಕೆಲವು ಜನರೂ ನಂಬುವುದರಿಂದ ನಮಗೆ ಮತಗಳೇ ಬರುವುದಿಲ್ಲ. ಆ ಕಾರಣಕ್ಕೆ ನಾನು ದೇವಸ್ಥಾನಗಳಿಗೆ ಹೋಗಲೇಬೇಕಿದೆ ಎಂದು ವಿವರಿಸಿದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟರಬೇಕು ಎಂದರು.

ಗುಡಿ, ಚರ್ಚು, ಮಸೀದಿಗಳ ಬಿಟ್ಟು ಬನ್ನಿ. ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂದು ಆಶಿಸಿದರು.

ನ್ಯಾ.ಹೆಚ್.ಎನ್.ನಾಗಮೋಹನ್ ದಾಸ್ ಸಂವಿಧಾನ ಕುರಿತು ಮಾತನಾಡಿದರು. ನಾಡೋಜ ಡಾ. ಹಂ.ಪ.ನಾಗರಾಜಯ್ಯ, ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಹೆಚ್.ಎನ್.ಹರಿ, ಎ.ವಿ.ಶ್ರೀಹರಿ ಉಪಸ್ಥಿತರಿದ್ದರು. ಹಲವು ಜಿಲ್ಲೆಗಳಿಂದ ಕುವೆಂಪು ಅಭಿಮಾನಿಗಳು, ಬರಗೂರು ಅವರ ಅಭಿಮಾನಿಗಳು ಬಂದಿದ್ದು ಸಭಾಂಗಣ ತುಂಬಿ, ಹೊರಗೂ ಜನ ನೆರೆದಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಶಮಿತಾ ಮಲ್ನಾಡು ಕುವೆಂಪು ಗೀತೆಗಳನ್ನು ಹಾಡಿದರು.

WhatsApp Image 2025 07 05 at 8.24.43 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...