ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ದೆಹಲಿ ಹೈಕೋರ್ಟ್

Date:

ದೆಹಲಿ ಪೊಲೀಸರು ದಾಖಲಿಸಿರುವ ದ್ವೇಷದ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ಖಾನ್‌ಗೆ ಕೋರ್ಟ್ ಸೂಚಿಸಿದೆ.

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ರಾಷ್ಟ್ರ ರಾಜಧಾನಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದೆ.ಇದಲ್ಲದೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಖಾನ್ ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಎಂಬ ಗ್ರೇಟ್ ಇಂಡಿಯನ್ ವಾಶಿಂಗ್ ಮಶೀನ್!

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...