ಆಸ್ಟ್ರೇಲಿಯಾ, ಅಮೆರಿಕ, ಸೌದಿಗೆ ನಂದಿನಿ ತುಪ್ಪ ರಫ್ತು: ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ

Date:

ಆಸ್ಟ್ರೇಲಿಯಾ, ಅಮೇರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೌದಿ, ಯುಎಸ್‌ಎ, ಆಸ್ಟ್ರೇಲಿಯಾಗೆ ಪ್ರಪ್ರಥಮ ಬಾರಿಗೆ ನಂದಿನಿ ತುಪ್ಪ ರಫ್ತು ಯೋಜನೆಗೆ ಬೆಂಗಳೂರಿನಲ್ಲಿ ಮಂಗಳವಾರ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೂಲತಃ ಮೈಸೂರು ಜಿಲ್ಲೆಯವರಾದ ಕುಮಾರ್ ಎಂಬುವರು ಅಮೆರಿಕದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ್ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ನಂದಿನಿಯ ತುಪ್ಪಕ್ಕೆ ಹಾಗೂ ಎಲ್ಲ ಉತ್ಪನ್ನಗಳಿಗೆ ದಿನೇ ದಿನೇ ಹೆಚ್ಚು ಬೇಡಿಕೆ ಬರುತ್ತಿದೆ. ನಂದಿನಿಯನ್ನು ಜಗತ್ತಿಗೆ ಹೊರದೇಶಗಳಿಗೆ ವಿಸ್ತರಣೆ ಮಾಡುತ್ತಿದೆ. ಗ್ರಾಹಕರ ಬೇಡಿಕೆಗಳನ್ನು ನೋಡಿಕೊಂಡು ಎಲ್ಲವನ್ನೂ ಕೆಎಂಎಫ್ ಪೂರೈಸುತ್ತಿದೆ. ನಂದಿನಿಯ ಉತ್ಪನ್ನಗಳನ್ನು ನಕಲಿ ಮಾಡಿ, ಮಾರಾಟ ಮಾಡುವ ಬಗ್ಗೆ ದೂರುಗಳು ಬರುತ್ತಿದೆ. ಅದರ ಬಗ್ಗೆಯೂ ಕೆಎಂಎಫ್ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಕಲಿ ದಂಧೆಯ ಬಗ್ಗೆ ಜನರು ಜಾಗರೂಕರಾಗಿರಬೇಕು” ಎಂದು ತಿಳಿಸಿದರು.

ರಫ್ತು ಯೋಜನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರಾದ ಬಿ ಶಿವಸ್ವಾಮಿ, ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್‌ನ ತುಪ್ಪವನ್ನು ಆಸ್ಟ್ರೇಲಿಯಾ, ಅಮೇರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ನಂದಿನಿಯ ಮಾರುಕಟ್ಟೆಯನ್ನು ವಿಶ್ವಾದ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಆಸ್ಟ್ರೇಲಿಯಾ ಮತ್ತು ಅಮೇರಿಕಾಕ್ಕೆ ಕೂಲೂ ಸೂಪರ್ ಫುಡ್ ಹಾಗೂ ಸೌದಿ ಅರೇಬಿಯಾಕ್ಕೆ ಈಸ್ಟ್‌ ಎಂಡ್ ಎಂಬ ಏಜೆನ್ಸಿಯ ಮೂಲಕ ರಫ್ತು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ‘ಬ್ರಾಹ್ಮಣನೊಬ್ಬ ತನ್ನ ಮಗಳನ್ನು ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ; ವಿವಾದಕ್ಕೀಡಾದ ಐಎಎಸ್ ಅಧಿಕಾರಿ ಹೇಳಿಕೆ

“ಮೊದಲ ಹಂತದಲ್ಲಿ 13 ಮೆಟ್ರಿಕ್ ಟನ್ ತುಪ್ಪವನ್ನು ಮೂರು ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಸೌದಿ ಅರೇಬಿಯಾಕ್ಕೆ ಕೇರಳದ ಕೊಚ್ಚಿನ್ ಶಿಪ್ ಯಾರ್ಡ್‌ ಮೂಲಕ ಮತ್ತು ಆಸ್ಟ್ರೇಲಿಯಾ, ಅಮೇರಿಕಕ್ಕೆ ಚೆನ್ನೈಯಿಂದ ಹಡಗಿನಲ್ಲಿ ರಫ್ತಾಗಲಿದೆ. ಇನ್ನೂ ಹೆಚ್ಚಿನ ಬೇಡಿಕೆ ಬಂದಲ್ಲಿ ಮತ್ತಷ್ಟು ತುಪ್ಪವನ್ನು ಕಳುಹಿಸಿಕೊಡುತ್ತೇವೆ. ಈಗಾಗಲೇ ಟೆಟ್ರಾಪ್ಯಾಕ್ ಹಾಲು, ತುಪ್ಪ, ಚೀಸ್, ಡೇರಿ ವೈಟ್ನರ್, ಬೆಣ್ಣೆ, ಐಸ್‌ಕ್ರೀಂ, ಪೆಟ್ ಬಾಟಲ್ ಉತ್ಪನ್ನಗಳು, ಸಿಹಿ ಉತ್ಪನ್ನ ಸೇವರೀಸ್ ಅನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಸ್ಟಾಂಡರ್ಡ್‌ ಅನ್ನು ಅಲ್ಲಿನ ನಿಯಮಗಳಿಗೆ ಅನುಗುಣವಾಗಿ ತಯಾರಿಸಿ ರಫ್ತು ಮಾಡುತ್ತಿದ್ದೇವೆ” ಎಂದು ಕೆಎಂಎಫ್‌ನ ಎಂಡಿ ಬಿ ಶಿವಸ್ವಾಮಿ ತಿಳಿಸಿದರು.

WhatsApp Image 2025 11 25 at 1.25.46 PM

ಈ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆಎಂಎಫ್‌ನ ಆಡಳಿತಾಧಿಕಾರಿಗಳು, ಮದರ್ ಡೇರಿ ನಿರ್ದೇಶಕರು, ಆಸ್ಟ್ರೇಲಿಯಾ-ಅಮೇರಿಕಕ್ಕೆ ಏಜೆನ್ಸಿ ಪಡೆದಿರುವ ಕುಮಾರ್, ಸೌದಿ ಅರೇಬಿಯಾಕ್ಕೆ ಏಜೆನ್ಸಿ ಪಡೆದಿರುವ ತೌಫೀಕ್ ಕೋಝಿಕ್ಕೋಡ್ ಹಾಗೂ ಕೆಎಂಎಫ್‌ ನ ಮಾರುಕಟ್ಟೆ ವಿಭಾಗದ ರಘುನಂದನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

photo 6138583034765183858 y
photo 6138583034765183868 y 1
photo 6138583034765183883 y
photo 6138583034765183850 y
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...