ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ

Date:

ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿನೇಶ್ ಫೋಗಟ್ ಅವರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು
ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೆರವು
ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್‌ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದರು.

ಸದೃಢ ಆರೋಗ್ಯಕ್ಕೆ ಕ್ರೀಡೆ-ವ್ಯಾಯಾಮ
ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...