ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ: ನಿಜಗುಣಾನಂದ ಶ್ರೀ

Date:

  • ‘ರಾಜ್ಯೋತ್ಸವ ಪ್ರಶಸ್ತಿಯನ್ನು ನಾಡಿನ ಪ್ರಗತಿಪರ ಚಿಂತಕರಿಗೆ ಅರ್ಪಿಸುತ್ತೇನೆ’
  • ‘ಸ್ವಾಮೀಜಿಯಾಗಿಯಲ್ಲ, ಸಮಾಜ ಸೇವಕನಾಗಿ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದೇನೆ
  • ‘ಬಸವಣ್ಣ ವಿಚಾರಧಾರೆಯಲ್ಲಿ ನಡೆದ ಸಿಎಂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ

ಯಾವುದೇ ಜಾತಿ ಬೆಂಬಲ ಇಲ್ಲದ ನನ್ನಂತವರಿಗೂ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದೆ ಎಂದರೆ ಇದು ಪ್ರಶಸ್ತಿ ಆಯ್ಕೆಯ ಪಾರದರ್ಶಕತೆಗೆ ಸಾಕ್ಷಿ. ರಾಜ್ಯೋತ್ಸವ ಪ್ರಶಸ್ತಿಯನ್ನು ನಾನು ಒಬ್ಬ ಸ್ವಾಮೀಜಿಯಾಗಿ ಸ್ವೀಕರಿಸುತ್ತಿಲ್ಲ; ಒಬ್ಬ ಸಮಾಜ ಸೇವಕನಾಗಿ ಸ್ವೀಕರಿಸುತ್ತಿರುವೆ ಎಂದು ಬೆಳಗಾವಿ ಜಿಲ್ಲೆಯ ಬೈಲೂರಿನ ನಿಷ್ಕಲ್ಮಶ ಮಠದ ನಿಜಗುಣಾನಂದ ಸ್ವಾಮೀಜಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ-2023 ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಸ್ವಾಮೀಜಿ ಮಾತನಾಡಿದರು.

ರಾಜ್ಯೋತ್ಸವ ಪ್ರಶಸ್ತಿ ಬುದ್ಧ, ಬಸವ, ಅಂಬೇಡ್ಕರ್‌ ತತ್ವಗಳಿಗೆ ಸಿಕ್ಕ ಗೌರವ ಎಂದು ಭಾವಿಸುವೆ. ಕರ್ನಾಟಕ ಬಹುಸಂಸ್ಕೃತಿಯ ನಾಡು. ಬಹುತ್ವದ ಭಾರತ ನಮ್ಮದು. ಮುಖ್ಯಮಂತ್ರಿ ಅವರಲ್ಲಿ ಒಂದು ವಿನಂತಿ ಏನೆಂದರೆ, ಕರ್ನಾಟಕ ನಾಮಕರಣಕ್ಕೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಲ್ಲಿ ‘ವಚನ ಸಂಸ್ಕೃತಿ ಅಭಿಯಾನ’ ಆರಂಭಿಸಬೇಕು ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಚನ ಸಂಸ್ಕೃತಿ ಅಭಿಯಾನ ಯಾಕೆ ಆಗಬೇಕು ಎಂದರೆ ರಾಜ್ಯದಲ್ಲಿ ದೀನ ದಲಿತರು, ಕೆಳವರ್ಗದ ಜನರು ವಚನಗಳನ್ನು ಬರೆದಿದ್ದಾರೆ. ಇದು ಇಂದಿನ ವಿದ್ಯಾರ್ಥಿಗಳಿಗೆ ತಿಳಿಯಬೇಕಿದೆ. ಜಾತಿ ವ್ಯವಸ್ಥೆ ನಿರ್ಮೂಲನೆ ಆಗಬೇಕಿದೆ. ಈ ಅಭಿಯಾನ ನಡೆದರೆ ಕರ್ನಾಟಕ ಏಕೀಕರಣಕ್ಕೆ ಒಂದು ಅರ್ಥ ಬರುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಶಾಲೆ, ಕಾಲೇಜುಗಳಲ್ಲಿ ‘ವಚನ ಸಂಸ್ಕೃತಿ ಅಭಿಯಾನ’: ಸಿಎಂ ಸಿದ್ದರಾಮಯ್ಯ ಘೋಷಣೆ

ಜಗದ್ಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಬೇಕು. ಈ ಮಾತು ಸಿದ್ದರಾಮಯ್ಯ ಅವರಲ್ಲಿ ನಾನು ಏಕೆ ಹೇಳುತ್ತಿದ್ದೇನೆ ಎಂದರೆ; ಬಸವಣ್ಣ ಅವರ ವಿಚಾರಧಾರೆಯಲ್ಲಿ ನಡೆದ ಮುಖ್ಯಮಂತ್ರಿಗಳಿದ್ದರೆ ಅದು ಸಿದ್ದರಾಮಯ್ಯನವರು ಎಂದು ಹೇಳಿದರು.

ಪಟ್ಟಭದ್ರ ಹಿತಾಸಕ್ತಿಗಳು, ಜಾತಿವಾದಿಗಳು, ಕೋಮುವಾದಿಗಳಿಂದ ಕೊಲೆ ಬೆದರಿಕೆ ಬಂದಿದೆ. ಸಮಾಜದ ಮೌಢ್ಯಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಕೊಲ್ಲುತ್ತೇವೆ ಎನ್ನುವ ಜನ ಇಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ನನಗೆ ರಕ್ಷಣೆ ಕೊಟ್ಟು, ಜೊತೆಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಟ್ಟಿದೆ. ನಾನು ಈ ಪ್ರಶಸ್ತಿಯನ್ನು ನಾಡಿನ ಎಲ್ಲ ಪ್ರಗತಿಪರ ಚಿಂತಕರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...