ನಿತೀಶ್ ಕುಮಾರ್ ಅನುಚಿತ ವರ್ತನೆ; ಕ್ಷಮೆಯಾಚಿಸಲು ಜನವಾದಿ ಮಹಿಳಾ ಸಂಘಟನೆ ಆಗ್ರಹ

Date:

ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರು, ಮುಸ್ಲಿಂ ಮಹಿಳೆಯ ಹಿಜಾಬ್ ಅನ್ನು ಎಳೆದು ಅವಮಾನಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.

ಹಿಜಾಬ್ ಕೇವಲ ಬಟ್ಟೆಯ ತುಂಡು ಅಲ್ಲ; ಇದು ನಂಬಿಕೆ, ಗುರುತಿನ ಅಭಿವ್ಯಕ್ತಿ ಮತ್ತು ವೈಯಕ್ತಿಕ ಆಯ್ಕೆಯಾಗಿದೆ. ಮಹಿಳೆ ಏನು ಧರಿಸಬೇಕೆಂದು ನಿರ್ಧರಿಸುವ ಹಕ್ಕಿನಲ್ಲಿ ಹಸ್ತಕ್ಷೇಪ ಮಾಡಲು ರಾಜ್ಯ ಸರ್ಕಾರ ಮಾಡುವ ಯಾವುದೇ ಪ್ರಯತ್ನವು ಭಾರತೀಯ ಸಂವಿಧಾನದ 14, 19, 21 ಮತ್ತು 25 ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ. ರಾಜ್ಯದ ಅತ್ಯುನ್ನತ ಹುದ್ದೆಯನ್ನು ಹೊಂದಿರುವ ವ್ಯಕ್ತಿ, ಅಸಭ್ಯ ರೀತಿಯಲ್ಲಿ ವರ್ತಿಸುವುದು ಗಂಭೀರ ಸ್ವರೂಪದ ಪ್ರಮಾದವಾಗಿದೆ. ಈ ಅವಮಾನಕರ ಮತ್ತು ನಾಚಿಕೆಗೇಡಿನ ಕೃತ್ಯಕ್ಕಾಗಿ ನಿತೀಶ್ ಕುಮಾರ್ ಅವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.

ಮುಖ್ಯಮಂತ್ರಿಯ ಈ ನೀಚ ಕೃತ್ಯವು ಸಾಂವಿಧಾನಿಕ ಮೌಲ್ಯಗಳು, ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಮಹಿಳೆಯರ ಸ್ವಾಯತ್ತತೆಯ ಮೂಲತತ್ವಗಳಿಗೆ ಸಂಪೂರ್ಣ ವಿರುದ್ದವಾಗಿದೆ. ತಮ್ಮ ಉಡುಪನ್ನು ನಿರ್ಧರಿಸುವ, ಮಹಿಳೆಯರ ಹಕ್ಕು ,ಅವರ ಘನತೆ, ಸ್ವಾಯತ್ತತೆ ಮತ್ತು ಸಮಾನತೆಯಲ್ಲಿ ಅಂತರ್ಗತವಾಗಿರುವಂತಹದ್ದು ಎಂದು ಜನವಾದಿ ಮಹಿಳಾ ಸಂಘಟನೆ ದೃಢವಾಗಿ ಪ್ರತಿಪಾದಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ಉಡುಪುಗಳನ್ನು, ವಿಶೇಷವಾಗಿ ಮುಸ್ಲಿಂ ಮಹಿಳೆಯರ ಉಡುಪುಗಳನ್ನು ನಿಯಂತ್ರಿಸಲು ಅಥವಾ ನಿಗಾ ವಹಿಸಲು ರಾಜ್ಯ ಸರ್ಕಾರ ಮಾಡುವ ಯಾವುದೇ ಪ್ರಯತ್ನವು ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಸಂವಿಧಾನಾತ್ಮಕ ಖಾತರಿಗಳ ಉಲ್ಲಂಘನೆಯಾಗಿದೆ. ಇಂತಹ ಅವಮಾನಕರ ನಡವಳಿಕೆಯು, ಸಾಮಾಜಿಕ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ವಿಶೇಷವಾಗಿ ಮುಸ್ಲಿಂ ಮಹಿಳೆಯರನ್ನು ಅತೀವವಾಗಿ ಘಾಸಿಗೊಳಿಸುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?

ಒಂದು ಕಾಲದಲ್ಲಿ ಸಾಮಾಜಿಕ ನ್ಯಾಯ ಮತ್ತು ಧರ್ನಿರಪೇಕ್ಷತೆ ಯನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದ ನಿತೇಶ್ ಕುಮಾರ್ ಅವರು ಈಗ ಬಹುಸಂಖ್ಯಾತವಾದ ಮತ್ತು ಹೊರಗಿಡುವ ಕಾರ್ಯಸೂಚಿಗಳಿಗೆ ಅನುಗುಣವಾದ ನೀತಿಗಳನ್ನು ಅನುಕರಿಸುತ್ತಿರುವುದು ತೀವ್ರ ದುರದೃಷ್ಟಕರ. ಶಿಸ್ತು, ಏಕರೂಪತೆ ಅಥವಾ ಆಡಳಿತದ ನೆಪದಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಳ್ಳುವುದು ಸಾಂಸ್ಥಿಕ ತಾರತಮ್ಯವಲ್ಲದೆ ಬೇರೇನೂ ಅಲ್ಲ. ಈ ಹಿನ್ನೆಲೆಯಲ್ಲಿ ಬಿಹಾರ ಸಂಪುಟ ಸಚಿವ ಸಂಜಯ್ ನಿಶಾದ್ ಮತ್ತು ಬಿಜೆಪಿ ನಾಯಕರು ನೀಡಿದ ಹೇಳಿಕೆಗಳು ಕೂಡ ಅತ್ಯಂತ ಆಕ್ಷೇಪಾರ್ಹ ಹಾಗೂ ಅಸಹ್ಯಕರವಾಗಿವೆ. ಈ ಅನುಚಿತ ವರ್ತನೆ ಮೂಲಕ ನಿತೇಶ್ ಕುಮಾರ್ ಅವರು ತಮ್ಮ ಕೋಮುವಾದಿ ಮತ್ತು ಪಿತೃಪ್ರಧಾನ ಮುಖವನ್ನು ಪ್ರತಿಗಾಮಿ ಆರ್‌ಎಸ್‌ಎಸ್ ಮನುವಾದಿ ಆಳ್ವಿಕೆಯೊಂದಿಗೆ ಹೊಂದಿಸಿಕೊಳ್ಳುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಸ್ಪಷ್ಟ ಮತ್ತು ನಿಸ್ಸಂದಿಗ್ಧವಾದ ಸ್ಪಷ್ಟೀಕರಣವನ್ನು ಬಿಹಾರ ಸರ್ಕಾರವು ತಕ್ಷಣವೇ ಹೊರಡಿಸಬೇಕೆಂದು ಮತ್ತು ಯಾವುದೇ ಮಹಿಳೆ ಅಥವಾ ಹುಡುಗಿ ತನ್ನ ಉಡುಪಿನ ಆಧಾರದ ಮೇಲೆ ಶಿಕ್ಷಣ ಅಥವಾ ಸಾರ್ವಜನಿಕ ಸೇವೆಗಳನ್ನು ನಿರಾಕರಿಸದಂತೆ ನೋಡಿಕೊಳ್ಳಬೇಕು. ಈ ಅನುಚಿತ ವರ್ತನೆಯ ಬಲಿಪಶು ಆಗಿರುವ ಡಾ. ನುಸ್ರತ್ ಪರ್ವೀನ್ ರವರಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬೆಂಬಲ ವ್ಯಕ್ತಪಡಿಸುತ್ತದೆ ಮತ್ತು ಬಿಹಾರ ಮುಖ್ಯಮಂತ್ರಿಯ ಸಂವಿಧಾನಬಾಹಿರ ವರ್ತನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಸಂಘಟನೆಗಳು, ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ನಾಗರಿಕ ಸಮಾಜವು ಒಗ್ಗಟ್ಟಿನಿಂದ ಒತ್ತಾಯಿಸಬೇಕೆಂದು ಕರೆ ನೀಡುತ್ತದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸುತ್ತದೆ ಎಂದು ಅಧ್ಯಕ್ಷರಾದ ಚಂದ್ರಕುಮಾರಿ ಪ್ರಧಾನ ಕಾರ್ಯದರ್ಶಿಯಾದ ದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...