ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ: ‌ಡಿಸಿಎಂ ಡಿಕೆ ಶಿವಕುಮಾರ್

Date:

  • ‘ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದ ಪ್ರತಿಪಕ್ಷದ ನಾಯಕರ ಆಯ್ಕೆ ಆಗಿಲ್ಲ’
  • ಹುಬ್ಬಳ್ಳಿಯಲ್ಲಿ ಡಿಕೆಶಿ ಸ್ವಾಗತಿಸಲು ಧಾರವಾಡ ಜಿಲ್ಲೆಯ ಒಬ್ಬ ಶಾಸಕ ಮಾತ್ರ ಆಗಮನ

ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ, ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದಲೇ ಈವರೆಗೂ ವಿರೋಧ ಪಕ್ಷದ ನಾಯಕರ ಆಯ್ಕೆ ಆಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯಲ್ಲಿ ಮತ್ತು ಅವರ ನಾಯಕರಲ್ಲಿ ಅಸಮಾಧಾನವಿದೆ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡುವ ಸಾಮರ್ಥ್ಯ ಇಲ್ಲ” ಎಂದು ಟೀಕಿಸಿದರು.

“ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಅವರೆಲ್ಲ ಶೇ.75 ಕ್ಷೇತ್ರಕ್ಕೆ ಹೋಗಿ ಸ್ಥಳೀಯ ಶಾಸಕರನ್ನು, ಕಾರ್ಯಕರ್ತರುಗಳನ್ನು ಭೇಟಿಯಾಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ವರದಿ ಸಲ್ಲಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಹೈಕಮಾಂಡ್‌ ಕೂಡ ಕೆಲವು ಸಲಹೆ ನೀಡಿದೆ. ಹೊಸ ಮುಖ, ವಾಕ್ಚಾತುರ್ಯ, ಯುವಕರು ಸೇರಿ ಹಲವು ಮಾನದಂಡಗಳನ್ನು ಇಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ. ಈ ನಿಟ್ಟಿನಲ್ಲಿ ವರದಿ ಸಿದ್ಧವಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ತಲೆಯೆತ್ತಿದೆ ಫೋನ್ ಬೇಹುಗಾರಿಕೆ ಭೂತ!

ಡಿಕೆಶಿ ಸ್ವಾಗತಕ್ಕೆ ಶಾಸಕರ ಗೈರು

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಧಾರವಾಡ ಜಿಲ್ಲೆಯ ಕೇವಲ ಒಬ್ಬ ಶಾಸಕ ಮಾತ್ರ ಬಂದಿದ್ದರು. ಉಳಿದ ಶಾಸಕರು ಕಾಣಲಿಲ್ಲ. ಧಾರವಾಡ ಜಿಲ್ಲೆಯಲ್ಲಿ ನಾಲ್ಕು ಜನ ಕಾಂಗ್ರೆಸ್‌ ಶಾಸಕರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕಲಘಟಗಿ ಶಾಸಕ ಸಂತೋಷ ಲಾಡ್‌, ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಗೈರಾಗಿದ್ದರು.
ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮಾತ್ರ ಆಗಮಿಸಿದ್ದರು. ಧಾರವಾಡ ಶಾಸಕ ವಿನಯ ಕುಲಕರ್ಣಿ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯೊಳಗೆ ಪ್ರವೇಶಿಸುವಂತಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...