ಜಾತಿ ಗಣತಿ ಯಾರ ಪರ, ಯಾರ ವಿರೋಧ ಇಲ್ಲ: ಚಲುವರಾಯಸ್ವಾಮಿ

Date:

  • ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಾರೆ
  • ಭ್ರೂಣ ಹತ್ಯೆ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ: ಭರವಸೆ

ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಾರೆ. ಜಾತಿ ಗಣತಿ ಯಾರ ಪರ, ಯಾರ ವಿರೋಧ ಇಲ್ಲ. ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆ ಈ ಸರ್ಕಾರದಲ್ಲಿ ಇಲ್ಲ ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಾರೆ. ಬೇರೆ ಬೇರೆ ಕಾರಣಕ್ಕೆ ಆಯಾ ಸಮಾಜದವರು ಆತಂಕದಲ್ಲಿ ಹೇಳಬಹುದು. ನನಗೆ ಸಿದ್ದರಾಮಯ್ಯನವರ ಮೇಲೆ ನಂಬಿಕೆ ಇದೆ. ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಜಾರಿಗೊಳಿಸುತ್ತಾರೆ” ಎಂದರು.

ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ಭ್ರೂಣ ಹತ್ಯೆ ಪತ್ತೆ ಪ್ರಕರಣದ ಬಗ್ಗೆ ಮಾತನಾಡಿ, ‘ಗೃಹ  ಸಚಿವ ಡಾ.ಜಿ.ಪರಮೇಶ್ವರ್‌ ಈ ಬಗ್ಗೆ ಗಮನ ಹರಿಸುತ್ತಾರೆ. ಸೂಕ್ತ ಕ್ರಮವಾಗುತ್ತದೆ, ಎಲ್ಲದಕ್ಕೂ ಕಡಿವಾಣ ಹಾಕಲಾಗುವುದು. ವಿಪಕ್ಷಗಳು ಈ ಹಿಂದೆ ಆಡಳಿತ ಮಾಡಿದಾಗ ಇದಕ್ಕೆ ಕಡಿವಾಣ ಹಾಕಿಲ್ಲ. ನಾವು ಮಾಡುವಾಗ ಮಾಹಿತಿ ನೀಡಿ ಪ್ರೋತ್ಸಾಹ ಕೊಡುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ಟೀಕೆಗೆ ಮುಂದಾಗುತ್ತಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

“ಈ ಕಾಲದಲ್ಲೂ ಈ ತರಹದ ಕೆಲಸ ಮಾಡಿದ್ದಾರೆ ಅಂದರೆ ನಂಬಕ್ಕಾಗಲ್ಲ. ಈ ಕಾಲದಲ್ಲೂ ಈ ರೀತಿ ನಡೆದಿರುವುದು ದೊಡ್ಡ ಅಪರಾಧ. ಎಲ್ಲಾ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ, ತಕ್ಕ ಶಿಕ್ಷೆಯಾಗಲಿ. ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...