ಬೆಳಗಾವಿಗೆ ಲಿಂಗಾಯತ, ಚಿಕ್ಕೋಡಿಗೆ ಕುರುಬ ಸಮುದಾಯಗಳ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Date:

  • ‘ರಾಹುಲ್ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಟಿಕೆಟ್‌ ಕೇಳಿಲ್ಲ’
  • ‘ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ’

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯ ಅಭ್ಯರ್ಥಿಗೆ ಅವಕಾಶ ಕೊಡಲು ಚಿಂತನೆ ನಡೆಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲು ಕಸರತ್ತು ಆರಂಭಿಸಿರುವ ಕಾಂಗ್ರೆಸ್, ಬೆಳಗಾವಿಯಲ್ಲಿ ಯಾವ ಸಮುದಾಯದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂಬುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ವಿಧಾನಸಭೆ ಚುನಾವಣೆ ರೀತಿ ಆಕಾಂಕ್ಷಿ ಅಭ್ಯರ್ಥಿಗಳಿಂದ ಟಿಕೆಟ್​ಗಾಗಿ ಹಣ ಪಡೆಯುತ್ತೀರಾ ಎಂದು ಪ್ರಶ್ನಿಸಿದಾಗ, “ಉಚಿತವಾಗಿ ಲೋಕಸಭೆ ಅಭ್ಯರ್ಥಿಗಳ ಅರ್ಜಿಯನ್ನು ಸ್ವೀಕರಿಸುತ್ತೇವೆ. ಸಚಿವರು ಚುನಾವಣೆಗೆ ಸ್ಪರ್ಧಿಸಬೇಕೆಂದು ವರಿಷ್ಠರು ಸೂಚನೆ ನೀಡಿಲ್ಲ. ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಆಕಾಂಕ್ಷಿಗಳ ಹೆಸರು ಚರ್ಚೆ ಆಗಲಿದೆ. ಜನವರಿಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಾದರೆ ಒಳ್ಳೆಯದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೆಲ್ಲುವ ಕುದುರೆಗೆ ಟಿಕೆಟ್ ನೀಡಲಾಗುವುದು. ಕಾರ್ಯಕರ್ತರ ಹಂತದಲ್ಲಿ ಲೋಕಸಭೆ ಚುನಾವಣೆಗೆ ತಯಾರಿ ಆಗುತ್ತಿದೆ. ರಾಹುಲ್ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಟಿಕೆಟ್‌ ಕೇಳಿಲ್ಲ. ಯಾರು ಆಕಾಂಕ್ಷಿಗಳು ಅನ್ನುವುದು ಡಿಸೆಂಬರ್​​ನಲ್ಲಿ ಚರ್ಚೆ ಆಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತವರೂ ಸ್ಪರ್ಧೆ ಮಾಡಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಡೂಪ್ಲಿಕೇಟ್‌ ಸಿಎಂಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಎಚ್‌ ಡಿ ಕುಮಾರಸ್ವಾಮಿ ಕಿಡಿ

“ಅಧಿವೇಶನದ ಬಳಿಕ ಅಭ್ಯರ್ಥಿಗಳ ಬಗ್ಗೆ ತೀರ್ಮಾನ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆಗೆ ಮಾನದಂಡ ಅಂದರೆ ಗೆಲ್ಲುವವನು ಆಗಿರಬೇಕು. ಜಾತಿ ಜೊತೆಗೆ ಜನಪ್ರಿಯತೆಯನ್ನು ಸಹ ಅಭ್ಯರ್ಥಿ ಹೊಂದಿರಬೇಕು. ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲುವ ಟಾರ್ಗೆಟ್​ ಇದೆ” ಎಂದು ಹೇಳಿದರು.

ಡಿಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಚಳಿಗಾಲ ಅಧಿವೇಶನದ ಒಳಗೆ ಯಾರೂ ಡಿಸಿಎಂ ಆಗುವುದಿಲ್ಲ. ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಲು ಅವಕಾಶವಿದೆ. ಲೋಕಸಭೆ ಚುನಾವಣೆ ಬಳಿಕ ಡಿಸಿಎಂ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡಬೇಕು” ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಂಚ ರಾಜ್ಯಗಳ ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, “ವಿರೋಧ ಪಕ್ಷದಲ್ಲಿ ಇದ್ದಾರೆ, ಅವರಿಗೆ ಎಲ್ಲ ಮಾತನಾಡಲು ಹಕ್ಕಿದೆ. ನಾವು ಮಾತಾಡಬೇಡಿ ಅಂತಾ ಹೇಳಲು ಆಗುವುದಿಲ್ಲ. ನಮ್ಮ ಪಕ್ಷದಲ್ಲಿ, ನಮ್ಮ ಮಂತ್ರಿ ಮಂಡಲದಲ್ಲಿ ಯಾರು ಹಣ ಸಂಗ್ರಹಿಸಲು ಹೇಳಿಲ್ಲ. ವಿರೋಧ ಪಕ್ಷದಲ್ಲಿ ಸುಮ್ಮನೇ ಹೇಳುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...