ಶಾಲಾ ಶೈಕ್ಷಣಿಕ ಪ್ರವಾಸ, ಮದುವೆಗಳಿಗಿಲ್ಲ ಸಾರಿಗೆ ಬಸ್‌ಗಳು

Date:

ಪ್ರತಿ ವರ್ಷ ನವೆಂಬರ್, ಡಿಸೆಂಬರ್ ಮತ್ತು ಜನವರಿಯಲ್ಲಿ ಶಾಲಾ ಪ್ರವಾಸಗಳು ಮತ್ತು ಕಾರ್ತಿಕ ಮಾಸದ ವಿವಾಹಗಳು ನಡೆಯುತ್ತವೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಪ್ರವಾಸಕ್ಕಾಗಿ ಸರ್ಕಾರಿ ಬಸ್‌ಗಳನ್ನು ಕ್ಯಾಶುಯಲ್ ಗುತ್ತಿಗೆ (ಸಿಸಿ) ಆಧಾರದ ಮೇಲೆ ಕಾಯ್ದಿರಿಸುತ್ತವೆ. ಆದರೆ, ಈ ವರ್ಷ ಕಿತ್ತೂರು ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‌ಗಳನ್ನು ಕಾಯ್ದಿರಿಸುವುದು ಶಾಲೆಗಳಿಗೆ ಸವಾಲಾಗಿದೆ. ಹಲವು ಶಾಲೆಗಳು ಬಸ್‌ಗಳು ದೊರೆಯದೆ ಪ್ರವಾಸಗಳನ್ನು ರದ್ದುಗೊಳಿಸುವ ಚಿಂತನೆ ನಡೆಸಿವೆ.

ಸಾರಿಗೆ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಕ್ಕೆ ಒದಗಿಸಲು ಸಾರಿಗೆ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಬಸ್‌ಗಳ ಕಾರ್ಯಾಚರಣೆ ಹೆಚ್ಚಾಗಿದೆ. ಯೋಜನೆಯಿಂದಾಗಿ ಮರುಪಾವತಿ ಮೂಲಕ ಸರ್ಕಾರದಿಂದ ಉತ್ತಮ ಆದಾಯವನ್ನೂ ಸಾರಿಗೆ ಘಟಕಗಳು ಪಡೆಯುತ್ತಿವೆ. ಅಲ್ಲದೆ, ಬಸ್‌ಗಳ ಸಂಚಾರ ಮಾರ್ಗದಲ್ಲಿ ಪ್ರಯಾಣಿಕರ ಬೇಡಿಕೆಗಳನ್ನು ಪೂರೈಸಲು ಆದ್ಯತೆ ನೀಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ

ಹೀಗಾಗಿ, ಶಾಲೆಗಳು ಬಸ್‌ಗಳ ಲಭ್ಯತೆಗೆ ಅನುಗುಣವಾಗಿ ತಮ್ಮ ಪ್ರವಾಸಗಳನ್ನು ಯೋಜಿಸಬೇಕು ಮತ್ತು ಬಸ್‌ಗಳ ಲಭ್ಯತೆಗಾಗಿ ಕಾಯುವಂತೆ ಮಾಡಿದೆ. ಪರಿಣಾಮ, ಬಸ್‌ಗಳ ಅಲಭ್ಯತೆಯಿಂದ ಹಲವು ಶಾಲೆಗಳು ಶೈಕ್ಷಣಿಕ ಪ್ರವಾಸಗಳನ್ನು ರದ್ದುಗೊಳಿಸಲು ಮಂದಾಗಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷವಾಗಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಲವು ಘಟಕಗಳಲ್ಲಿ ಬಸ್‌ಗಳ ಕೊರತೆ ಇದೆ. ಪ್ರಸ್ತುತ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗಗಳಲ್ಲಿ ಟೈರ್‌ಗಳು ಮತ್ತು ಬಿಡಿಭಾಗಗಳ ಕೊರತೆಯಿಂದ ಹಲವು ಬಸ್‌ಗಳು ರಸ್ತೆಗಿಳಿಯುತ್ತಿಲ್ಲ. ಅಲ್ಲದೆ, ಸಾರಿಗೆ ಇಲಾಖೆಯ ನಾಲ್ಕು ಸಾರಿಗೆ ನಿಗಮಗಳು (ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ, ಬಿಎಂಟಿಸಿ) ಸಿಸಿ ಬಸ್‌ಗಳ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಕೆಎಸ್‌ಆರ್‌ಟಿಸಿ ಬೆಂಗಳೂರಿನ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಟಿಒಐ ವರದಿ ಮಾಡಿದೆ.

“ಸಾಮಾನ್ಯ ಪ್ರಯಾಣಿಕರ ಹಿತದೃಷ್ಟಿಯಿಂದ ಹೊಸ ಬಸ್‌ಗಳು ಬರುವವರೆಗೆ ಸಿಸಿ ಬುಕಿಂಗ್ ಅನ್ನು ಮುಂದೂಡಲಾಗಿದೆ. ಸ್ಥಳೀಯ ಅಗತ್ಯಗಳನ್ನು ಪೂರೈಸಲು ನಾವು ಅಂತರ-ರಾಜ್ಯ ಸೇವೆಗಳನ್ನು ನಿಲ್ಲಿಸಿದ್ದೇವೆ. ಈಗಿರುವ ಬಸ್‌ಗಳನ್ನು ಸಿಸಿ ಬುಕ್ಕಿಂಗ್‌ಗೆ ಒದಗಿಸಿದರೆ ಬಸ್‌ ನಿಲ್ದಾಣಗಳಲ್ಲಿ ಜನಸಂದಣಿಯನ್ನು ನಿಭಾಯಿಸುವುದು ಕಷ್ಟವಾಗುತ್ತದೆ” ಎಂದು ಬೆಳಗಾವಿ ವಿಭಾಗೀಯ ಸಂಚಾರ ಅಧಿಕಾರಿ ಕೆ.ಕೆ.ಲಮಾಣಿ ತಿಳಿಸಿದ್ದಾರೆ.

“ಸಿಸಿ ಬುಕ್ಕಿಂಗ್‌ಗೆ ಬಸ್ ಒದಗಿಸದಂತೆ ಆದೇಶವಿದೆ ಎಂದು ಸ್ಥಳೀಯ ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ. ಆದೇಶದ ಪ್ರತಿಯನ್ನು ಒದಗಿಸುವಂತೆ ನಾನು ಅವರನ್ನು ಕೇಳಿದಾಗ, ಅವರು ಅದನ್ನು ನೀಡಲು ನಿರಾಕಿರಿಸದರು” ಎಂದು ಬೆಳಗಾವಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಪ್ರಕಾಶ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...