ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಸೂಚನೆ

Date:

ರಾಜ್ಯದ ಜಲಾಶಯಗಳಿಂದ ನೆರೆಯ ರಾಜ್ಯ ತಮಿಳುನಾಡಿಗೆ 2024ರ ಜನವರಿ ತಿಂಗಳಿಡೀ ನಿತ್ಯ 1,030 ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಸೂಚಿಸಿದೆ.

ದೆಹಲಿಯಲ್ಲಿ ಮಂಗಳವಾರ ನಡೆದ ಸಮಿತಿ ಸಭೆ ಈ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್‌ ತಿಂಗಳ ಬಾಕಿ ಅವಧಿಗೆ ನಿತ್ಯ 3,128 ಕ್ಯುಸೆಕ್‌ ಹಾಗೂ ಜನವರಿ ತಿಂಗಳಿಡೀ ನಿತ್ಯ 1,030 ಕ್ಯುಸೆಕ್‌ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಒಂದೆರಡು ದಿನಗಳಲ್ಲಿ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ, ಈ ಶಿಫಾರಸನ್ನು ಅನುಮೋದಿಸುವ ನಿರೀಕ್ಷೆಯಿದೆ.

ನೆರೆಯ ತಮಿಳುನಾಡು ರಾಜ್ಯವು ಹಿಂಬಾಕಿ 7.60 ಟಿಎಂಸಿ ಸೇರಿ ಒಟ್ಟು 14 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಲು ಆಗ್ರಹಿಸಿತು. ಆದರೆ, ಈ ಬೇಡಿಕೆಯನ್ನು ತಳ್ಳಿಹಾಕಿದ ಕರ್ನಾಟಕ, “ಡಿಸೆಂಬರ್‌ 18ರವರೆಗೆ ಕಾವೇರಿ ನದಿ ಪಾತ್ರದ ಎಲ್ಲ ನಾಲ್ಕು ಜಲಾಶಯಗಳಿಗೆ ಶೇ.53.84 ರಷ್ಟು ಒಳಹರಿವಿನ ಕೊರತೆ ಇದೆ. ಜಲಾಶಯಗಳಿಗೆ ನೀರಿನ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದ್ದು, ಸದ್ಯ ಲಭ್ಯವಿರುವ ನೀರಿನಲ್ಲಿ ಬೆಳೆದಿರುವ ಬೆಳೆ ಹಾಗೂ ಕುಡಿಯುವ ನೀರಿನ ಅಗತ್ಯ ಭರಿಸುವುದೇ ಸವಾಲಾಗಿದೆ” ಎಂದು ವಾದಿಸಿತು. ಆದರೂ, ಮುಂದಿನ ತಿಂಗಳಲ್ಲಿ ನಿತ್ಯ 1,030 ಕ್ಯುಸೆಕ್ ನೀರು ಬಿಡಲು ಸಮಿತಿ ಶಿಫಾರಸು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಸೆಂಬರ್‌ 19ಕ್ಕೆ ಜಲಾಶಯದಲ್ಲಿ 96.7 ಅಡಿಯಷ್ಟು ನೀರಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟವು 124.8 ಅಡಿ ಆಗಿದೆ. ಸದ್ಯ 28 ಅಡಿಗಳಷ್ಟು ನೀರು ಕಡಿಮೆ ಇದೆ. ಇನ್ನು ಜಲಾಶಯದ ಗರಿಷ್ಟ ನೀರು ಸಂಗ್ರಹ ಸಾಮರ್ಥ್ಯವು 49.452 ಟಿಎಂಸಿ ಇದ್ದು, ಸದ್ಯ 20.363 ಟಿಎಂಸಿ ನೀರು ಸಂಗ್ರಹವಾಗಿದೆ. ಶೇ.60 ರಷ್ಟು ಜಲಾಶಯ ಖಾಲಿ ಇದೆ” ಎಂದು ಕೆಆರ್‌ಎಸ್‌ ಜಲಾಶಯ ನೀರಾವರಿ ನಿಗಮದ ಮಾಹಿತಿ ಹೊರಹಾಕಿದೆ.

ಬಳಸಲು ಯೋಗ್ಯವಾದ ನೀರಿನ ಪ್ರಮಾಣವು 11.9 ಟಿಎಂಸಿಯಷ್ಟಿದ್ದು, ಒಟ್ಟಾರೆ ಸಂಗ್ರಹವಿರುವ ನೀರಿನಲ್ಲಿ ಅರ್ಧದಷ್ಟು ನೀರು ಮಾತ್ರ ಬಳಕೆಗೆ ಯೋಗ್ಯವಾಗಿದೆ. ಜಲಾಶಯದ ಒಳಹರಿವು 1,177 ಕ್ಯುಸೆಕ್‌, ಹೊರ ಹರಿವು 574 ಕ್ಯುಸೆಕ್‌ ಇದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಹಸಿರು ಸೇನಾ ಪಡೆ ವತಿಯಿಂದ ಸರ್ಕಾರಕ್ಕೆ ಮಂಗಳಾರತಿ ಎತ್ತುವ ಮೂಲಕ ಪ್ರತಿಭಟನೆ ನಡೆಸಿದ್ದು, ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.‌

ಈ ಸುದ್ದಿ ಓದಿದ್ದೀರಾ? ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ

“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಪದೇಪದೆ ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡುತ್ತಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸದರು, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದ್ದರೂ ಮೌನವಹಿಸಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರದ್ದು ಮಾಡಬೇಕು. ಆಗ ಮಾತ್ರ ಕರ್ನಾಟಕದ ಪಾಲಿಗೆ ನ್ಯಾಯ ಸಿಗುತ್ತದೆ. ಕಾವೇರಿ ನೀರು ನಿಲ್ಲಿಸುವವರೆಗೆ ಸಂಘಟನೆಯ ಹೋರಾಟ ಮುಂದುವರೆಯಲಿದೆ”‌ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...