ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ

Date:

ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ಆಕ್ಷೇಪಣೆಗಳನ್ನು ಆಹ್ವಾನಿಸಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ಕರಡು ಮೀಸಲಾತಿ ಅಧಿಸೂಚನೆಯನ್ನು ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು 2021ರಲ್ಲಿ ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಲೇವಾರಿ ಮಾಡಿತು.

“ಒಂದು ವಾರದಲ್ಲಿ ಹೊರಡಿಸಲಾಗುವ ಕರಡು ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸುವ ಪ್ರಕ್ರಿಯೆ ಪೂರ್ಣಗೊಂಡ ಎರಡು ವಾರಗಳ ನಂತರ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಯನ್ನು ಅಂತಿಮಗೊಳಿಸಲಾಗುವುದು” ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಸಂಜೆಯೊಳಗೆ ತಮ್ಮ ಭರವಸೆಯನ್ನು ನ್ಯಾಯಾಲಯದ ಮುಂದೆ ಇಡುವಂತೆ ನಿರ್ದೇಶಿಸಿದ ನ್ಯಾಯಾಲಯವು ಅರ್ಜಿಯನ್ನು ವಿಲೇವಾರಿ ಮಾಡಿತು.

ಎಸ್ಇಸಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರ ಸಲ್ಲಿಕೆಗಳನ್ನು ಆಲಿಸಿದ ನ್ಯಾಯಾಲಯ, “ಅಡ್ವಕೇಟ್ ಜನರಲ್ ನೀಡಿದ ಯಾವುದೇ ಭರವಸೆಯ ಉಲ್ಲಂಘನೆಯಾಗಿದ್ದರೆ ಸೂಕ್ತ ಕ್ರಮಗಳನ್ನು ಪ್ರಾರಂಭಿಸಲು ಅರ್ಜಿದಾರರು ನ್ಯಾಯಾಲಯವನ್ನು ಸಂಪರ್ಕಿಸಬಹುದು” ಎಂದು ಹೇಳಿದರು.

“ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2021ಅನ್ನು ಲೆಕ್ಕಿಸದೆ ಸಂವಿಧಾನದ 243-ಇ ವಿಧಿಯಡಿ ಆದೇಶವನ್ನು ಈ ಪ್ರಕ್ರಿಯೆಯು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ನ್ಯಾಯಾಲಯವು ಹೇಳಿದೆ.‌

ಈ ಸುದ್ದಿ ಓದಿದ್ದೀರಾ?  ಗ್ರಾಮೀಣ ಕರ್ನಾಟಕದ ವಿದ್ಯಾರ್ಥಿಗಳು ಗಣಿತದಲ್ಲಿ ಹಿಂದುಳಿದಿದ್ದಾರೆ: ಸಮೀಕ್ಷೆ

2021 ಮಾರ್ಚ್ 30ರ ಅಂತಿಮ ಡಿಲಿಮಿಟೇಶನ್ ಅಧಿಸೂಚನೆ ಮತ್ತು ಜುಲೈ 1 ರ ಕರಡು ಮೀಸಲಾತಿ ಅಧಿಸೂಚನೆಗಳಿಗೆ ಅನುಸಾರವಾಗಿ ಎಲ್ಲ ತಾ.ಪಂ ಮತ್ತು ಜಿ.ಪಂ.ಗಳಿಗೆ ಚುನಾವಣೆಗಳನ್ನು ನಡೆಸಲು ಎಸ್ಇಸಿ ಈಗಾಗಲೇ ಪ್ರಾರಂಭಿಸಿದ ಪ್ರಕ್ರಿಯೆ ಮತ್ತು ಕ್ರಮಗಳನ್ನು ಮುಂದುವರಿಸಲು ಹಾಗೂ ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಸ್ಇಸಿ 2021 ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...