ಸಂಖ್ಯಾಬಲ ಮುಖ್ಯ ಅಲ್ಲ, ಅಧಿವೇಶನ ಬಳಿಕ ಡಿ ಕೆ ಶಿವಕುಮಾರ್‌ ಸಿಎಂ ಆಗುತ್ತಾರೆ:‌ ಇಕ್ಬಾಲ್ ಹುಸೇನ್

Date:

ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಕಾಂಗ್ರೆಸ್‌ನೊಳಗೆ ಯಾರೂ ಮಾತನಾಡಬಾರದು ಎಂದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಹೇಳುತ್ತಿದ್ದರೂ ಅವರವರ ಬೆಂಬಲಿಗರು ಮಾತ್ರ ಸೂಚನೆ ಲೆಕ್ಕಿಸದೇ ತಮ್ಮ ಇಷ್ಟ ಬಂದಂತೆ ಮಾತನಾಡುವ ಸಂಪ್ರದಾಯ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಈ ಬಗ್ಗೆ ಶುಕ್ರವಾರ ಮಾತನಾಡಿದ್ದು, “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾ‌ರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದಿದ್ದಾರೆ.

“ಗುರುವಾರ ರಾತ್ರಿ ನಾವು 55 ಜನ ಶಾಸಕರು ಊಟಕ್ಕೆ ಸೇರಿದ್ದೆವು. ಊಟ ಮಾಡಿದ್ದೇವೆ. ನಮಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆಗುತ್ತಾರೆ. ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿಲ್ಲವೇ, ಹಾಗೇ ಡಿ.ಕೆ .ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದೆ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಔತಣಕೂಟದಲ್ಲಿ 50-60 ಜನರು ಸೇರಿದ್ದರು. ರಾಜಕೀಯ ಚರ್ಚೆ ಏನೂ ಆಗಿಲ್ಲ. ಡಿ.ಕೆ.ಶಿವಕುಮಾರ್ ಕರೆದರೆ ಎಲ್ಲ 224 ಜನ ಶಾಸಕರೂ ಕರೆದರೆ ಊಟಕ್ಕೆ ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದಲ್ಲ. ವಿಶ್ವಾಸ, ಪ್ರೀತಿ ಒಂದು ಬಾಂಧವ್ಯ. ಎಲ್ಲರೂ ಡಿ.ಕೆ. ಶಿವಕುಮಾರ್ ಅವರಿಗೆ ಆತ್ಮೀಯರೇ” ಎಂದು ತಿಳಿಸಿದರು.

“ಅಧಿವೇಶನ ಮುಗಿದ ಬಳಿಕ ಡಿ ಕೆ ಶಿವಕುಮಾರ್‌ ಅವರಿಗೆ ಬೇಗ ಫಲ ಸಿಗುತ್ತದೆ. ಪಕ್ಷ ಕಟ್ಟಲು ಸಾಕಷ್ಟು ಕಷ್ಟಪಟ್ಟಿದ್ದಾರೆ. ನಂಬ‌ರ್ ಮುಖ್ಯ ಅಲ್ಲ, ಹೈಕಮಾಂಡ್‌ನ ನಿರ್ದೇಶನ ಮುಖ್ಯ. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಶಾಸಕರ ಸಂಖ್ಯಾಬಲ ಮುಖ್ಯ ಅಲ್ಲವೇ ಅಲ್ಲ” ಎಂದು ಹೇಳಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮಧ್ಯೆ ಸಿಎಂ ಹುದ್ದೆ ಬದಲಾವಣೆ ವಿಷಯ ಚರ್ಚೆಯಾಗುತ್ತಲೇ ಇದೆ. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಪುತ್ರ ಯತೀಂದ್ರ ಅವರು, “ಮುಖ್ಯಮಂತ್ರಿ ಹುದ್ದೆಯಲ್ಲಿ ಯಾವುದೇ ಗೊಂದಲವಾಗಲಿ, ಭಿನ್ನಾಭಿಪ್ರಾಯವಾಗಲಿ ಇಲ್ಲ. ಎಲ್ಲವೂ ಸ್ಪಷ್ಟವಾಗಿದೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ನನ್ನ ತಂದೆಯೇ 5 ವರ್ಷ ಸಿಎಂ ಆಗಿ ಇರುತ್ತಾರೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...