ಡಿ.26ಕ್ಕೆ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಗೆ ಚಾಲನೆ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್

Date:

  • ಯುವನಿಧಿ ಪಡೆಯವುದು ಹೇಗೆ ಎಂಬ ವಿವರ ಇಲ್ಲಿದೆ
  • ತಪ್ಪು ಮಾಹಿತಿ ನೀಡಿ ಹಣ ಪಡೆದರೆ ಕಾನೂನು ಕ್ರಮ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಮ್ಮ ಸರ್ಕಾರದ ಐದನೇ ಕಾರ್ಯಕ್ರಮ ನೋಂದಣಿ ಚಾಲನೆ ಮಾಡುತ್ತಿದ್ದೇವೆ. ಡಿ. 26 ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಲೋಗೋ ಅನಾವರಣ ಮಾಡಲಿದ್ದಾರೆ. ಅಂದಿನಿಂದ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ” ಎಂದರು.

“ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯಲಿದೆ. ನಮ್ಮ ಭರವಸೆಗಳಂತೆ ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳು ಆಗಿದ್ರೆ ಅವರು ಈ ಯುವನಿಧಿಗೆ ಅರ್ಹರಾಗಿರುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪದವಿ ಪಾಸ್ ಆದವರೆಗೆ 3 ಸಾವಿರ, ಡಿಪ್ಲೋಮಾ 1,500 ಸಾವಿರ ಎರಡು ವರ್ಷಗಳವರೆಗೆ ನೀಡುತ್ತೇವೆ. ಮಧ್ಯದಲ್ಲಿ ಯಾರಿಗೆ ಕೆಲಸ ಸಿಗುತ್ತೆ ಅವರಿಗೆ ಯುವನಿಧಿ ಸವಲತ್ತು ನಿಲ್ಲಿಸಲಾಗುತ್ತದೆ” ಎಂದು ಸಚಿವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ತಪ್ಪು ಮಾಹಿತಿ ನೀಡಿದರೆ ಕ್ರಮ

“ಯುವ ನಿಧಿ ಫಲಾನುಭವಿಗಳು ಕೆಲಸ ದೊರೆತಿದೆಯೋ ಇಲ್ಲವೋ ಎಂಬುದನ್ನು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಇದನ್ನು ಶೇ.100 ರಷ್ಟು ನಾವು ನೇರವಾಗಿ ಹುಡುಕಲು ಸಾಧ್ಯವಿಲ್ಲ. ಸಾಕಷ್ಟು ಸವಾಲು ಇದೆ. ಕೆಲಸ ಸಿಕ್ಕಿದವರು ಯುವನಿಧಿ ಪಡೆದುಕೊಂಡರೆ, ಆ ಹಣವನ್ನು ವಾಪಸ್ ಪಡೆಯುತ್ತೇವೆ. ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ನಮಗೆ ನಮ್ಮ ಯುವಕರ ಮೇಲೆ ನಂಬಿಕೆ‌ ಇದೆ. ಸರ್ಕಾರದ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ” ಎಂದರು.

“10 ಲಕ್ಷಕ್ಕೂ ಹೆಚ್ಚು ಅರ್ಹರಿಗೆ ಪ್ರಯೋಜನ ಸಿಗಲಿದೆ. 250 ಕೋಟಿ ರೂ. ಹಣವನ್ನು ಯೋಜನೆಗೆ ನಿಗದಿ ಮಾಡಲಾಗಿದೆ. ಮುಂದಿನ ವರ್ಷ 1,250 ಕೋಟಿ ಬಜೆಟ್ ಅವಶ್ಯಕತೆ ಇದೆ. ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು” ಎಂದು ಸಚಿವರು ಹೇಳಿದರು.

ಯೋಜನೆಗೆ ಕೆಲವು ಮಾನದಂಡ ನಿಗದಿ

• ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ
• 2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಲಭಿಸದವರು ಅರ್ಜಿ ಸಲ್ಲಿಸಬಹುದು
• ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ ಎರಡು ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ಈ ಭತ್ಯೆ ಸಿಗಲಿದೆ
• ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಭತ್ಯೆಯನ್ನು ಡಿಬಿಟಿ ಮೂಲಕ ನೀಡಲಾಗುವುದು
• ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು
• ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು (ಸ್ಟೇಟ್‌ಮೆಂಟ್) ಪ್ರತಿ ನೀಡಬೇಕು
• ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...