ಒಮ್ಮೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೆ ಬೀಗ ತೆಗೆಯೋದು ಸರಿಯಲ್ಲ: ಸಚಿವ ರಾಮಲಿಂಗಾರೆಡ್ಡಿ

Date:

ಒಂದು ಬಾರಿ ಬಿಗ್‌ಬಾಸ್ ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗುವವರೆಗೂ ಬೀಗ ತೆಗೆಯುವುದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ನಡೆಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಬಿಗ್‌ಬಾಸ್‌ಗೆ ಬೀಗ ಹಾಕಿ ಮತ್ತೆ ತೆಗೆದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ವಿಷಯವನ್ನು ಮಾಧ್ಯಮಗಳ ಮೂಲಕ ನೋಡಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿ ಅವರು ಬಿಗ್‌ಬಾಸ್ ನಿಯಮ ಮೀರಿದ್ದಾರೆ ಅಂತ ನೋಟಿಸ್ ಕೊಟ್ಟಿದ್ದರು. ಜಾಲಿಡೇಸ್‌ ಸಂಸ್ಥೆ ನೋಟಿಸ್‌ಗೂ ಉತ್ತರಿಸಿರಲಿಲ್ಲ ಎಂದು ಬೀಗ ಹಾಕಿದ್ದರು. ಈಗ ನಿನ್ನೆ ಡಿಕೆ ಶಿವಕುಮಾರ್ ಅನುಮತಿ ನೀಡಿ ಅಂತ ಹೇಳಿದ್ದಾರೆ ಅಂತ ಮಾಧ್ಯಮಗಳಲ್ಲಿ ನೋಡಿದೆ. ನನಗೆ ಇಷ್ಟೇ ಮಾಹಿತಿ ಗೊತ್ತಿರುವುದು. ನಾನು ಊರಲ್ಲಿ ಇರಲಿಲ್ಲ. ಇಷ್ಟೇ ಗೊತ್ತಿರೋದು ಅಂತ ತಿಳಿಸಿದರು.

ಇದನ್ನು ಓದಿದ್ದೀರಾ? ಬಿಗ್‌ ಬಾಸ್ | ಮನೆಯನ್ನು ತಕ್ಷಣವೇ ಬಂದ್​ ಮಾಡಲು ನೋಟಿಸ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಸಾರಿ ನೋಟಿಸ್ ಕೊಟ್ಟ ಮೇಲೆ, ಮುಚ್ಚಿದ ಮೇಲೆ ಅದು ಸರಿಯಾಗುವವರೆಗೂ ತೆಗೆಯುವುದಕ್ಕೆ ಅವಕಾಶ ಕೊಡಬಾರದು. ನನಗೆ ಡಿಸಿ ಮಾಹಿತಿ ಕೊಡುವುದಕ್ಕೆ ನಾನು ಊರಲ್ಲಿ ಇರಲಿಲ್ಲ. ಮಾಲಿನ್ಯ ‌ಮಂಡಳಿ ಸ್ವಾಯತ್ತ ಸಂಸ್ಥೆ. ಅದರ ಕೆಲಸ ಅದು ಮಾಡಿದೆ. ಏನಾಗಿದೆ ತಿಳಿದುಕೊಳ್ಳುತ್ತೇನೆ. ಈಗ ಏನ್ ಆಯ್ತು ಅಂತ ಡಿ ಕೆ ಶಿವಕುಮಾರ್ ಅವರನ್ನೇ ಕೇಳಿ ಎಂದರು.

ಪರಿಸರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಡದಿಯಲ್ಲಿರುವ ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ ಮಾಡಲಾಗಿತ್ತು. ಅಲ್ಲೇ ಇರುವ ಬಿಗ್‌ಬಾಸ್‌ ಮನೆಗೂ ಇದರ ಬಿಸಿ ತಟ್ಟಿತ್ತು. ರಾತ್ರೋರಾತ್ರಿ ಬಿಗ್‌ಬಾಸ್‌ ಸ್ಪರ್ಧಿಗಳನ್ನು ಮನೆಯಿಂದ ಹೊರಹಾಕಲಾಗಿತ್ತು. ಒಂದು ದಿನದ ಬೆಳವಣಿಗೆ ಬೆನ್ನಲ್ಲೇ, ಜಾಲಿವುಡ್‌ ಸ್ಟುಡಿಯೋಸ್‌ ಗೇಟ್‌ಗೆ ಹಾಕಿರುವ ಬೀಗ ತೆಗೆಯುವಂತೆ ಡಿಸಿಎಂ ಸೂಚನೆ ನೀಡಿದ್ದರು. ಈಗ ಜಾಲಿವುಡ್‌ ಸ್ಟುಡಿಯೋ ತೆರೆಯಲಾಗಿದ್ದು, ಸ್ಪರ್ಧಿಗಳು ಕೂಡ ಬಿಗ್‌ಬಾಸ್‌ ಮನೆಗೆ ವಾಪಸ್‌ ಆಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...