ಒಂದಲ್ಲಾ ಒಂದು ದಿನ ನಾನು ರಾಜ್ಯದ ಮುಖ್ಯಮಂತ್ರಿ ಆಗುವೆ: ಸಚಿವ ಎಂ ಬಿ ಪಾಟೀಲ್ ಭವಿಷ್ಯ

Date:

ಒಂದಲ್ಲಾ ಒಂದು ದಿನ ನಾನು ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಚಿವ ಎಂ ಬಿ ಪಾಟೀಲ್ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ‘ಎಂ ಬಿ ಪಾಟೀಲ್‌ ಸಿಎಂ ಆಗುವುದಿಲ್ಲ’ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ‌ಪ್ರತಿಕ್ರಿಯೆ ನೀಡಿ, “ಈಗ ನಾನು ಸಿಎಂ ಆಗುವ ಸನ್ನಿವೇಶ ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ, ಮುಂದೆಯೂ ಸಿಎಂ ಆಗಿಯೇ ಇರುತ್ತಾರೆ. ನಾನೂ ಹಿರಿಯನಿದ್ದೇನೆ. ಒಂದಲ್ಲಾ ಒಂದು ದಿನ ರಾಜ್ಯದ ಮುಖ್ಯಮಂತ್ರಿಯಾಗುವೆ” ಎಂದರು.

“ಶಿವಾನಂದ ಪಾಟೀಲರು ಸಿಎಂ‌ ಆಗಲ್ಲ, ಅವರು ಜೆಡಿಎಸ್ ನಿಂದ ಬಂದವರು. ಬದಲಾಗಿ ವಿಜಯಪುರದಿಂದ ಸಿಎಂ ಆಗೋದು ನಾನೇ” ಎಂದು ಪರೋಕ್ಷವಾಗಿ ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಗೃಹ ಸಚಿವನಾಗಿದ್ದೆ. ಆಗಲೂ ಜೈಲಿನಲ್ಲಿ ಇಂತ ವ್ಯವಸ್ಥೆ ನೋಡಿದ್ದೇನೆ. ಘಟನೆಯನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅದಕ್ಕಾಗಿ ದರ್ಶನ್ ಅಂಡ್ ಟೀಮ್ ಚದುರಿಸಲಾಗಿದೆ. ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ” ಎಂದರು.

“ಮುಡಾ ಸೈಟ್ ಹಂಚಿಕೆ ಆಗಿದ್ದು ಬಿಜೆಪಿ ಅವಧಿಯಲ್ಲಿ. ಇದರಲ್ಲಿ ಸಿದ್ದರಾಮಯ್ಯನವರ ಪಾಲೇನಿದೆ. ಮುಡಾದಿಂದ ಯಾರು ಭಯಗೊಂಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡ್ತಿದ್ದೇವೆ. ಇದರಲ್ಲಿ ನಮಗೆ‌ ಜಯ ಸಿಕ್ಕೇ ಸಿಗುತ್ತದೆ. ಹಗಲು ಗನಸು ಬೇಡ. ಆದರೆ ಗವರ್ನರ್ ನಡವಳಿಕೆ ಮಾತ್ರ ಕಾನೂನು ಬಾಹಿರ” ಎಂದು ತಿಳಿಸಿದರು.

“ವಿಜಯೇಂದ್ರ ಅವರು ತಮ್ಮ ತಂದೆ ಸಿಲುಕಿಸಿದ್ದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕು. ಏನೇನೋ‌ ಮಾಡಿ ಅವರ ರಾಜೀನಾಮೆ ಕೊಡಿಸಿದ್ರಲ್ಲ. ಬಿಜೆಪಿಯವರೇ ಅವರನ್ನು ಕೆಳಗೆ ಇಳಿಸಿದ್ದು. ಇದನ್ನು ಮೊದಲು ವಿಜಯೇಂದ್ರ ಅರಿಯಲಿ” ಎಂದು ಪ್ರಶ್ನೆಯೊಂದಕ್ಕೆ

“ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದ್ದು, ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ. ಇದನ್ನ ನಾನು ಹೇಳಿಲ್ಲ‌,ಯತ್ನಾಳ್ ಹೇಳಿದ್ದಾರೆ. ಜೋಶಿ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಾರಾ? ಬಿಜೆಪಿಯವರು ಆ ಹಣವನ್ನು ಚುನಾವಣೆಗೆ ಖರ್ಚು ಮಾಡಿದ್ರಾ? ಇಲ್ಲ ಬಿಜೆಪಿ ಹೈಕಮಾಂಡ್‌ಗೆ ಹೋಯ್ತಾ” ಎಂದು ಪ್ರಶ್ನಿಸಿದರು.

ಡಿಕೆಶಿ ಅವರನ್ನು ಬದಲಾಯಿಸುವ ಒತ್ತಡ ಇಲ್ಲ

“ತೆಲಂಗಾಣ ಮಾದರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗಮನದಲ್ಲಿ ಇದೆ. ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ . ಪಾರ್ಲಿಮೆಂಟ್ ಚುನಾವಣೆಗೂ ಅವರನ್ನು ಮುಂದುವರಿಸಲಾಗಿದೆ. ಸ್ವಾಭಾವಿಕವಾಗಿ ಅವರ ಮೇಲೆ ಒತ್ತಡ ಇದೆ . ಅವರನ್ನ ತೆಗೆಯಬೇಕು ಎಂಬ ಒತ್ತಡ ಇಲ್ಲ”‌ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...