ತಾರತಮ್ಯವಿಲ್ಲದೆ ಒಬ್ಬರ ಪಕ್ಕ ಒಬ್ಬರು ಕೂರಬೇಕು, ಇದು ನನ್ನ ಆಶಯ : ಸಿದ್ದರಾಮಯ್ಯ

Date:

  • ‘ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆಯನ್ನು ಅಳಿಸಿ ಹಾಕಿದ್ದ ಶರಣರು’
  • ‘ಬಸವ ಜಯಂತಿಯಂದೇ ಮೊದಲ ಬಾರಿ ಸಿಎಂ ಪ್ರಮಾಣ ವಚನ ಸ್ವೀಕರಿಸಿದೆ’

ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ, ಯಾವುದೇ ಭೇದಭಾವ ಇಲ್ಲದೇ ಒಬ್ಬರ ಪಕ್ಕ ಒಬ್ಬರು ಕೂರುವ ಸಮಾಜ ನಿರ್ಮಾಣ ಬಸವಾದಿ ಶರಣರ ಆಶಯವಾಗಿತ್ತು. ಇದು ನನ್ನ ಆಶಯವೂ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಬಸವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

“ಬಸವಾದಿ ಶರಣರು ಮೇಲ್ವರ್ಗದವರ ಪರವಾಗಿ ಕೆಲಸ ಮಾಡಲಿಲ್ಲ. ಶೂದ್ರ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿದರು. ತಳ ಸಮುದಾಯದ ಅಲ್ಲಮಪ್ರಭು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲೇ ಜಾರಿಗೆ ತಂದವರು ಬಸವಾದಿ ಶರಣರು. ಆ ಕಾಲದಲ್ಲೇ ಅಂತರ್ಜಾತಿ ವಿವಾಹ ಮಾಡಿಸಿದವರು ಬಸವಣ್ಣ. ಈ ಕಾರಣಕ್ಕೇ ಬಸವಣ್ಣನವರ ವಿರುದ್ಧ ಬಿಜ್ಜಳನನ್ನು ಎತ್ತಿಕಟ್ಟಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“12ನೇ ಶತಮಾನದ ಶರಣರ ಆಶಯಗಳು ಇನ್ನೂ ಈಡೇರಿಲ್ಲ. ಸ್ವಾತಂತ್ರ್ಯ ಬಂದು 76 ವರ್ಷಗಳ ನಂತರವೂ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳು ಈಡೇರಿಲ್ಲ. ಅಸಮಾನತೆ ಹೋಗಿಲ್ಲ. ಈ ಬಗ್ಗೆ ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನ ಜಾರಿ ಸಂದರ್ಭದಲ್ಲೇ ಎಚ್ಚರಿಸಿದ್ದರು. ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನೇ 12ನೇ ಶತಮಾನದಲ್ಲೇ ಬಸವಣ್ಣ ಮತ್ತು ಬಸವಾದಿ ಶರಣರು ಕೊಟ್ಟಿದ್ದರು” ಎಂದು ಹೇಳಿದರು.

“ಜನರ ಭಾಷೆಯಲ್ಲೇ ಸಾಹಿತ್ಯ ರಚಸಿದ್ದು ಬಸವಾದಿ ಶರಣರು ಮಾಡಿದ ಬಹಳ ದೊಡ್ಡ ಕ್ರಾಂತಿ. ಸಂಸ್ಕೃತದಲ್ಲಿ ಸಾಹಿತ್ಯ ರಚಿಸಿದರೆ ಜನರಿಗೆ ಅರ್ಥ ಆಗುತ್ತದಾ? ಯಾರಿಗೂ ಅರ್ಥ ಆಗುವುದಿಲ್ಲ ಎನ್ನುವ ಕಾರಣಕ್ಕೆ ಜನರ ಭಾಷೆಯಲ್ಲಿ ಅತ್ಯುನ್ನತ ಕನ್ನಡದಲ್ಲಿ ಶರಣ ಸಾಹಿತ್ಯ ರಚನೆಯಾಯಿತು” ಎಂದರು.

ಈ ಸುದ್ದಿ ಓದಿದ್ದೀರಾ? ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಸರ್ವರ ಮುಖ್ಯಮಂತ್ರಿ : ಹೆಚ್‌ ಸಿ ಮಹದೇವಪ್ಪ

“ಬಸವಾದಿ ಶರಣರು 12ನೇ ಶತಮಾನದಲ್ಲೇ ಜಡ್ಡುಗಟ್ಟಿದ ಜಾತಿ ಸಮಾಜಕ್ಕೆ ಚಲನೆ ನೀಡಿದರು. ಜಾತಿ ರಹಿತ ಸಮಾಜ, ಮೌಢ್ಯಗಳನ್ನು ಕಿತ್ತೆಸೆದು ಕಂದಾಚಾರಗಳಿಲ್ಲದ ಸಮಾಜ ನಿರ್ಮಾಣಕ್ಕೆ ಮುಂದಾದರು. ಸಮಾಜ ಜಾತಿ ಆಧಾರದಲ್ಲಿ ವಿಭಜನೆ ಆಗಬಾರದು. ಕುವೆಂಪು ಅವರು, ‘ಹುಟ್ಟುತ್ತಾ ಎಲ್ಲರೂ ವಿಶ್ವ ಮಾನವರು. ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ’ ಎಂದಿದ್ದರು. ನಾವು ಹಾಗಾಗಬಾರದು. ಶ್ರೇಣೀಕೃತ ಸಮಾಜ ಹೋಗಬೇಕು. ಸಮನಾಂತರ ಸಮಾಜ ಬರಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು” ಎಂದರು.

“ವೀರಶೈವ-ಲಿಂಗಾಯತ ಸಮುದಾಯ ಈ ಕಾರ್ಯಕ್ರಮದಲ್ಲಿ ಮುಂದಿಟ್ಟಿರುವ ಬೇಡಿಕೆಗಳನ್ನು ಮುಂದಿನ ಬಜೆಟ್‌ನಲ್ಲಿ ಗಣನೀಯವಾಗಿ ಪರಿಗಣಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು. ಬಸವೇಶ್ವರ ಪುತ್ಥಳಿ ದಾನ ಮಾಡಿದ ನೈಸ್ ಸಂಸ್ಥೆಯ ಮುಖ್ಯಸ್ಥರಾದ ಅಶೋಕ್ ಖೇಣಿ, ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಾ. ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...