ಆನ್‌ಲೈನ್‌ ಬೆಟ್ಟಿಂಗ್ | ಶಾಸಕ ವೀರೇಂದ್ರ ಪಪ್ಪಿ ಮತ್ತೆ 4 ದಿನ ಇ.ಡಿ ವಶಕ್ಕೆ

Date:

ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಹಗರಣ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಆನ್‌ಲೈನ್‌ ಮತ್ತು ಆಫ್‌ಲೈನ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಅಕ್ರಮ ಚಟುವಟಿಕೆ ಆರೋಪದಡಿ ಸದ್ಯ ಜಾರಿ ನಿರ್ದೇಶನಾಲಯದ (ಇ ಡಿ) ವಶದಲ್ಲಿರುವ ವೀರೇಂದ್ರ ಪಪ್ಪಿ ಅವರ ಕಸ್ಟಡಿ ಅವಧಿ ಗುರುವಾರಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಮಧ್ಯಾಹ್ನ ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ ಇ ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಐ ಎಸ್‌ ಪ್ರಮೋದ್‌ ಚಂದ್ರ ಅವರು “ಆರೋಪಿ ವೀರೇಂದ್ರ ಅವರ ಕಸ್ಟಡಿ ಅವಧಿಯನ್ನು ಪುನಾ 15 ದಿನಗಳ ಕಾಲ ಮುಂದುವರಿಸಿ ಆದೇಶಿಸಬೇಕು” ಎಂದು ಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಈ ವೇಳೆ ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಆರೋಪಿಯನ್ನು ಮತ್ತೆ ವಶಕ್ಕೆ ನೀಡುವಂತೆ ಇ.ಡಿ ಸಲ್ಲಿಸಿದ ಮನವಿ ಪುರಸ್ಕರಿಸಿದ ನ್ಯಾಯಾಲಯ, ನಾಲ್ಕು ದಿನಗಳ ಕಾಲ ಪಪ್ಪಿ ಅವರನ್ನು ವಶಕ್ಕೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಲಭ್ಯವಿರುವ ಡಿಜಿಟಲ್‌ ಸಾಕ್ಷ್ಯ ಮತ್ತು ವೆಬ್‌ಸೈಟ್‌ಗಳಲ್ಲಿ ದೊರಕುತ್ತಿರುವ ಬೆಟ್ಟಿಂಗ್‌ ಪುರಾವೆಗಳ ಬಗ್ಗೆ ವಿವರಣೆ ಪಡೆಯಲು ಆರೋಪಿಯನ್ನು ಮುಖಾಮುಖಿಯಾಗಿ ಇರಿಸಿಕೊಂಡು ವಿಚಾರಣೆ ಮಾಡಬೇಕಿದೆ. ಆದ್ದರಿಂದ, ಕಸ್ಟಡಿ ಅವಧಿ ವಿಸ್ತರಿಸಬೇಕು” ಎಂದು ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವೀರೇಂದ್ರ ಪರ ವಾದಿಸಿದ ಹಿರಿಯ ವಕೀಲರಾದ ಎಚ್‌ ಎಸ್‌ ಚಂದ್ರಮೌಳಿ ಮತ್ತು ಕಿರಣ್ ಜವಳಿ ಅವರು “ಈಗಾಗಲೇ ವೀರೇಂದ್ರ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದಾರೆ. ಹೀಗಿರುವಾಗ ಅವರನ್ನು ಮತ್ತೆ ಕಸ್ಟಡಿಗೆ ಕೇಳುವುದು ಉಚಿತವಲ್ಲ” ಎಂದು ಪ್ರತಿಪಾದಿಸಿದರು. ಅಂತಿಮವಾಗಿ ನ್ಯಾಯಾಧೀಶರು ಆರೋಪಿಯನ್ನು ಮತ್ತೆ ನಾಲ್ಕು ದಿನಗಳ ಕಾಲ ಇ ಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್‌ಗಳನ್ನು ನಡೆಸಿ ಬಹುಕೋಟಿ ಹಣ ಗಳಿಸಿರುವ ಬಗ್ಗೆ ಶಾಸಕ ವೀರೇಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಆ.23 ರಂದು ವೀರೇಂದ್ರ ಅವರನ್ನು ಇ.ಡಿ ಬಂಧಿಸಿತ್ತು. ಇದಕ್ಕೂ ಮುನ್ನ ವೀರೇಂದ್ರ ಅವರ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳನ್ನು ಇ.ಡಿ ಶೋಧಿಸಿತ್ತು. ಈ ವೇಳೆ ಐಷಾರಾಮಿ ಕಾರುಗಳು, ಕೆ.ಜಿ. ಗಟ್ಟಲೆ ಚಿನ್ನ ಹಾಗೂ ಕೋಟ್ಯಂತರ ರು. ನಗದು ಜಪ್ತಿಯಾಗಿತ್ತು. ಬೆಟ್ಟಿಂಗ್ ಆ್ಯಪ್‌ಗಳಿಂದ ಕಡಿಮೆ ಅವಧಿಯಲ್ಲಿ ಸುಮಾರು 2000 ಕೋಟಿ ರು. ಗಳಿಸಿದ್ದಾರೆ ಎಂದು ತನಿಖೆ ವೇಳೆ ಪತ್ತೆಯಾಗಿರುವುದಾಗಿ ಇ.ಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...