ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು: ಸಿಎಂ

Date:

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸೂಕ್ತವಾಗಿದೆ. ಇದನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು ಹಾಗೂ ಇತಿಹಾಸದ ಅರಿವಿಲ್ಲದವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸುರು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸಕ್ಕೆಂದು ಭಾನುವಾರ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಉದ್ಘಾಟಕರ ಆಯ್ಕೆ ಅಧಿಕಾರವನ್ನು ಉನ್ನತ ಮಟ್ಟದ ಸಮಿತಿ ನನಗೆ ಕೊಟ್ಟಿತ್ತು. ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಅವರನ್ನು ನಾನು ಆಯ್ಕೆ ಮಾಡಿದ್ದೇನೆ. ಹಿಂದೆ ಮುಸ್ಲಿಮರೇ ಆದ ಕವಿ ಕೆ.ಎಸ್.ನಿಸಾರ್ ಅಹಮದ್‌ ಉದ್ಘಾಟಿಸಿದ್ದರು. ದಸರಾ ನಾಡಹಬ್ಬ ಹಾಗೂ ಸಾಂಸ್ಕೃತಿಕ ಹಬ್ಬ. ಇದನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ. ಹಿಂದೆ ಮಹಾರಾಜರ ಆಳ್ವಿಕೆ ಇಲ್ಲದಿರುವಾಗ ಹೈದರ್‌ ಆಲಿ, ಟಿಪ್ಪು ಸುಲ್ತಾನ್‌ ನಡೆಸಿರಲಿಲ್ಲವೇ? ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದಾದ ವಿಜೃಂಭಣೆಯಿಂದ ಮಾಡುತ್ತಿರಲಿಲ್ಲವೇ? ಇದು ಧರ್ಮಾತೀತ, ಜಾತ್ಯತೀತವಾದ ಹಬ್ಬ. ಎಲ್ಲ ಧರ್ಮದವರೂ ಆಚರಿಸುತ್ತಾರೆ‌’ ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕರ್ನಾಟಕದಲ್ಲಿ ಬೂಕರ್‌ ಪ್ರಶಸ್ತಿ ಪುರಸ್ಕೃತರು ಬಹಳ ಕಡಿಮೆ. ಹೀಗಾಗಿ, ಬಾನು ಅವರಿಗೆ ಅವಕಾಶ ಕೊಟ್ಟಿದ್ದೇವೆ. ಇದನ್ನು ಕೆಲವು ಧರ್ಮಾಂಧರು ಮಾತ್ರ ವಿರೋಧಿಸುತ್ತಿದ್ದಾರೆ. ಅಂಥವರು ಇತಿಹಾಸ ತಿಳಿದುಕೊಳ್ಳಲಿ’ ಎಂದು ‍ಪ್ರತಿಕ್ರಿಯಿಸಿದರು.
‘ಬಾನು ಅವರು ಹಿಂದೆ ಮಾಡಿದ್ದ ಭಾಷಣಕ್ಕೂ– ಈಗ ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೂ ಏನು ಸಂಬಂಧ? ಕನ್ನಡಾಂಬೆಯ ಬಗ್ಗೆ ಗೌರವವಿಲ್ಲದೇ ಕನ್ನಡದಲ್ಲಿ ಬರೆಯುತ್ತಿದ್ದಾರೆಯೇ? ಅವರು ಸಾಹಿತ್ಯ ರಚಿಸಿರುವುದು ಕನ್ನಡದಲ್ಲಿಯೇ ಅಲ್ಲವೇ? ‘ಎದೆಯ ಹಣತೆ’ ಯಾವ ಭಾಷೆಯಲ್ಲಿದೆ? ಕನ್ನಡದ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದಿದ್ದರೆ ಕನ್ನಡದಲ್ಲಿ ಬರೆಯಲು ಸಾಧ್ಯವೇ?’ ಎಂದು ಕೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

‘ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆ, ಕುಂಟು ನೆಪ ಹುಡುಕುತ್ತಿದ್ದಾರೆ’ ಎಂದು ಟೀಕಿಸಿದರು.

‘ದನದ ಮಾಂಸ ತಿಂದು ಬಂದು ದಸರಾ ಉದ್ಘಾಟಿಸಿ ಬಿಡುತ್ತಾರೇನೋ? ಎಂಬಂತಹ ಹೇಳಿಕೆಗಳನ್ನು ಡೋಂಗಿಗಳಷ್ಟೆ ನೀಡಲು ಸಾಧ್ಯ. ರಾಜಕೀಯಕ್ಕಾಗಿ ಮಾತನಾಡುವವರಿಗೆ ಉತ್ತರ ಕೊಡುವುದಿಲ್ಲ’ ಎಂದರು.

‘ಬೂಕರ್ ಪ್ರಶಸ್ತಿ ಹಂಚಿಕೊಂಡಿರುವ ಅನುವಾದಕಿ ದೀಪಾ ಭಾಸ್ತಿ ಅವರನ್ನೂ ಉದ್ಘಾಟನೆಗೆ ಆಹ್ವಾನಿಸಬೇಕಿತ್ತು’ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ದಸರೆಯನ್ನು ಇಬ್ಬರು ಉದ್ಘಾಟಿಸಲು ಆಗುತ್ತದೆಯೇ? ನಮ್ಮ ಸರ್ಕಾರ ಈಗಾಗಲೇ ಇಬ್ಬರಿಗೂ ತಲಾ ₹ 10 ಲಕ್ಷ ನೀಡಿ ಗೌರವ ಸಲ್ಲಿಸಿದೆ’ ಎಂದು ಹೇಳಿದರು.

ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್ ಖಾನ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್‌, ಕಾಂಗ್ರೆಸ್‌ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್, ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಮುಖಂಡ ಅಜೀಜ್‌ಉಲ್ಲಾ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...