ನಮ್ಮದು ಜಾತಿ ಗಣತಿ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ: ಕಾಂತರಾಜ ಸ್ಪಷ್ಟನೆ

Date:

  • ‘ವರದಿ ನೋಡದೆ ಸುಮ್ಮನೇ ಅವೈಜ್ಞಾನಿಕ ಎನ್ನುವುದು ಸರಿಯಲ್ಲ’
  • ‘ವರದಿಯ ಒಂದು ವಾಲ್ಯೂಮ್​ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೇ’

ಜಾತಿ ಗಣತಿ ವರದಿ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಪರ ವಿರೋಧದ ಚರ್ಚೆಗಳು ಗರಿಗೆದರಿವೆ. ಕೆಲವು ಸಮುದಾಯಗಳು ವರದಿ ಬಿಡುಗಡೆಗೆ ಆಗ್ರಹಿಸಿದ್ದರೆ, ಇನ್ನೂ ಕೆಲ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಸ್ವತಃ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಅವರು ತಮ್ಮ ವರದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ನಾನು ಕೊಟ್ಟ ಜಾತಿಗಣತಿ ವರದಿ ನೈಜವಾಗಿದೆ, ವೈಜ್ಞಾನಿಕವಾಗಿಯೇ ಇದೆ. ವರದಿ ನೋಡದೆ ಸುಮ್ಮನೇ ಅವೈಜ್ಞಾನಿಕ ಎನ್ನುವುದು ಸರಿಯಲ್ಲ” ಎಂದರು.

ಜಾತಿ ಗಣತಿ ವರದಿ ಸರಿಯಾಗಿಲ್ಲ. ಎಸಿ ರೂಮಿನಲ್ಲಿ ಕುಳಿತುಕೊಂಡು ವರದಿ ಸಿದ್ಧಪಡಿಸಿದ್ದಾರೆ ಎನ್ನುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ, “40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಜಾತಿ, ಲಿಂಗ, ಧರ್ಮ, ಆಸ್ತಿ-ಪಾಸ್ತಿ ಎಲ್ಲವೂ ಸೇರಿ ‌55 ಪ್ರಶ್ನೆ ಕೇಳಿದ್ದೇವೆ. ಕೂಲಂಕಷವಾಗಿ ಅಂಕಿ ಅಂಶಗಳ ಸಮೇತ ವರದಿ ಸಿದ್ಧ ಮಾಡಲಾಗಿದ್ದು, ರಾಜ್ಯ ಸರ್ಕಾರ ವರದಿ ನೋಡಿದ ಬಳಿಕ ಮುಂದಿನ ತೀರ್ಮಾನ ಮಾಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಗೆ ಒಕ್ಕಲಿಗರ, ಲಿಂಗಾಯತರ ವಿರೋಧ ವಿಚಾರವಾಗಿ ಮಾತನಾಡಿದ ಕಾಂತರಾಜ, “ಎರಡು ಸಮುದಾಯಗಳು ವಿರೋಧ ಮಾಡಬಹುದು‌. ಆದರೆ ವರದಿ ಮೊದಲು ನೋಡಲಿ. ಆಮೇಲೆ ಅದು ಸರಿಯಿಲ್ಲ ಎಂದರೆ ವಿರೋಧ ಮಾಡಲಿ. ವರದಿ ನೋಡಿ ಅದರಲ್ಲಿ ಏನಾದರು ತಪ್ಪು ಇದ್ದರೆ ನಾನು ಒಪ್ಪಿಕೊಳ್ಳುವೆ. ಆಯೋಗದಲ್ಲಿ ಕಷ್ಟ ಪಟ್ಟು ವರದಿ ಮಾಡೋ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

“ಜಾತಿಗಣತಿ ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಎನ್ನುವುದು ಸರಿಯಲ್ಲ. ವರದಿಯ ಒಂದು ವಾಲ್ಯೂಮ್​ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೇ. ಮೂಲ ಪ್ರತಿ ಕಾಣೆಯಾಗಿದೆ ಎನ್ನುವುದು ನನಗೆ ಗೊತ್ತಿಲ್ಲ. 2019ರಲ್ಲಿ ನಾನು ವರದಿ ಕೊಟ್ಟಿದ್ದು, ನಾನು ಇದ್ದಾಗ ಮೂಲಪ್ರತಿ ಇತ್ತು. ಇದು ಜಾತಿ ಗಣತಿ ಅಲ್ಲ, ಸಾಮಾಜಿಕ ಹಾಗೂ ಶೈಕ್ಷಣಿಕ ವರದಿ” ಎಂದು ಹೇಳಿದರು.

ಕುಮಾರಸ್ವಾಮಿ ಅವಧಿಯಲ್ಲಿ ವರದಿ ಸ್ವೀಕಾರ ಮಾಡಲಿಲ್ಲವಾ ಎಂದು ಪ್ರಶ್ನಿಸಿದಾಗ, “ಕುಮಾರಸ್ವಾಮಿಗೆ ಅಪಾಯಿಂಟ್‌ಮೆಂಟ್ ಕೇಳಿದ್ವಿ. ಆದರೆ ಅವರು ಸಮಯ ಕೊಡಲಿಲ್ಲ. ಹಿಂದುಳಿದ ವರ್ಗಗಳ ಗಮನದಲ್ಲಿಟ್ಟುಕೊಂಡು ಈ ಸಮೀಕ್ಷೆ ನಡೆಸಲಾಗಿದೆ” ಎಂದರು.

ಇದು ಕಾಂತರಾಜ ವರದಿನಾ? ಜಯಪ್ರಕಾಶ್ ಹೆಗ್ಡೆ ವರದಿನಾ ಎಂಬ ಪ್ರಶ್ನೆಗೆ ”ವರದಿ ಕೊಟ್ಟಿದ್ದು, ಸಮೀಕ್ಷೆ ಮಾಡಿದ್ದು ನಾವು. ಈಗ ಸರ್ಕಾರ ಏನಾದ್ರು ತೀರ್ಮಾನ ಮಾಡಬಹುದು. ಆದರೆ ನಾವು ಮಾಡಿದ ಕೆಲಸಕ್ಕೆ ಅವರ ವರದಿ ಅಂತ‌ ಹೇಳೋಕೆ ಹೇಗೆ ಸಾಧ್ಯ. ಜನರು ಕೇಳೋ ಅನುಮಾನಗಳಿಗೆ ಈಗಿನ ಅಧ್ಯಕ್ಷರು ಹೇಗೆ ಉತ್ತರ ಕೊಡೋಕೆ ಸಾಧ್ಯ. ಈಗ ವರದಿ ಅವರು ರೆಡಿ ಮಾಡಿದ್ರೆ ನಾವು ಹೇಗೆ ಉತ್ತರ ಕೊಡೋಕೆ ಸಾಧ್ಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...